ಬ್ರೇಕಿಂಗ್ ನ್ಯೂಸ್
07-01-24 08:48 pm HK News Desk ದೇಶ - ವಿದೇಶ
ನವದೆಹಲಿ, ಜ 07: ಪ್ರಧಾನಿ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಅಣಕಿಸಿ ಮಾಲ್ಡೀವ್ಸ್ ಸಚಿವರು ಮತ್ತು ರಾಜಕಾರಣಿಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಷಯವನ್ನು ಭಾರತೀಯ ರಾಯಭಾರಿ ಖಂಡಿಸಿದ ಬೆನ್ನಲ್ಲೇ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರ ತಲೆದಂಡವಾಗಿದೆ.
ನೆರೆಯ ಭಾರತವನ್ನು ಅವಮಾನಿಸುವ ಸಾಮಾಜಿಕ ಮಾಧ್ಯಮಗಳ ಕೆಲವು ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.
ಸಚಿವೆ ಮರಿಯಮ್ ಶಿಯುನಾ ತಮ್ಮ ಟ್ವೀಟ್ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು. ಇದು ಟೀಕೆ, ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಶಿಯುನಾ ತಮ್ಮ ಪೋಸ್ಟ್ಅನ್ನು ಒಂದೆರಡು ಗಂಟೆಗಳಲ್ಲೇ ಡೀಲಿಟ್ ಮಾಡಿದ್ದರು. ಆದರೆ, ಇದು ಅಷ್ಟೊತ್ತಿಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸಿತ್ತು.
ಮಾಲ್ಡೀವ್ಸ್ನ ಭದ್ರತೆ ಮತ್ತು ಸಮೃದ್ಧಿಗೆ ಸಹಕಾರಿಯಾದ ಪ್ರಮುಖ ಮಿತ್ರ ನಾಯಕನ ಬಗ್ಗೆ ಮಾಲ್ಡೀವ್ಸ್ ಸರ್ಕಾರದ ಶಿಯುನಾ ಎಂತಹ ಭಯಾನಕ ಭಾಷೆ ಇದು. ಮುಯಿಝು ಈ ಹೇಳಿಕೆಗಳಿಂದ ದೂರವಿರಬೇಕು. ಇದು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮತ್ತು ಭಾರತಕ್ಕೆ ಸ್ಪಷ್ಟ ಭರವಸೆ ನೀಡಬೇಕು'' ಎಂದು ನಶೀದ್ 'ಏಕ್ಸ್' ಪೋಸ್ಟ್ನಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ''ಸಚಿವರ ಅವಹೇಳನಕಾರಿ ಹೇಳಿಕೆಗಳು ಖಂಡನೀಯ ಮತ್ತು ಅಸಹ್ಯಕರ'' ಎಂದು ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸಚಿವರ ಬಗ್ಗೆ ಸ್ವದೇಶಿ ನಾಯಕರಿಂದಲೇ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
India has raised with the Maldives government the derogatory remarks against Prime Minister Narendra Modi by a minister of the island nation following a row that erupted after Maldivian politicians mocked the Prime Minister's Lakshadweep visit.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm