ಬ್ರೇಕಿಂಗ್ ನ್ಯೂಸ್
08-01-24 04:27 pm HK News Desk ದೇಶ - ವಿದೇಶ
ನವದೆಹಲಿ, ಜ.8: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ.
ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್ ಉಜ್ಜಾಲ್ ಭುವನ್ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್ ನ ಗೋಧ್ರಾದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಆದರೆ ಗುಜರಾತ್ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ. ಗುಜರಾತ್ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ.
ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.
In a highly anticipated judgment, the Supreme Court on Monday (January 8) set aside the remission of 11 convicts sentenced to life imprisonment for multiple murders and gang rapes, including that of Bilkis Bano, during the 2002 communal riots in Gujarat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm