ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm