ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm