ಬ್ರೇಕಿಂಗ್ ನ್ಯೂಸ್
20-01-24 07:13 pm HK News Desk ದೇಶ - ವಿದೇಶ
ರಾಮೇಶ್ವರ, ಜ.20: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ಶ್ರೀರಾಮ ರಾಮಾಯಣ ಕಾಲದಲ್ಲಿ ಬಂದು ಹೋಗಿದ್ದ ಸ್ಥಳ, ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಪ್ರಧಾನಿ ಮೋದಿ ಪವಿತ್ರ ಸಮುದ್ರ ಸ್ನಾನ ಮಾಡಿದ್ದಾರೆ.
ಬಳಿಕ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ ಪ್ರಧಾನಿ ಮೋದಿ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ರಾಮೇಶ್ವರದ ಅಗ್ನಿತೀರ್ಥ ಸಮುದ್ರದಲ್ಲಿ ಮೋದಿ ಪವಿತ್ರ ಸ್ನಾನ ಮಾಡಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಜಪಿಸುತ್ತಾ ಮೋದಿ ಪವಿತ್ರ ಸ್ನಾನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಮುದ್ರ ಸ್ನಾನ ಮಾಡಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಮೋದಿ, ಮಂದಿರದ ಆವರಣದಲ್ಲಿ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ್ದಾರೆ.
ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ರಾಮಾಯಣಕ್ಕೂ ನೇರ ಸಂಬಂಧವಿದೆ. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಭಗವಾನ್ ಶ್ರೀರಾಮ ಹಾಗೂ ಸೀತಾದೇವಿ ಪ್ರತಿಷ್ಠಾಪಿಸಿರುವ ಐತಿಹ್ಯವಿದೆ. ಶ್ರೀರಾಮ, ಸೀತಾದೇವಿ ಇದೇ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವ ಕುರಿತು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ.
ಇದಕ್ಕೂ ಮುನ್ನ ಚೆನ್ನೈನಲ್ಲಿ ಪ್ರಧಾನಿ ಮೋದಿ 6ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಅಧಿಕೃತ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಜ.31ರ ವರೆಗೆ ನಡೆಯಲಿದೆ.
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Prime Minister Narendra Modi who is in Tamil Nadu on his 3-day visit to the state performed 'smaran' and offered prayers at Sri Arulmigu Ramanathaswamy Temple in Rameswaram.The main deity worshipped in the temple is Sri Ramanathaswamy, which is a form of Lord Shiva. It is a widely held belief that the main lingam in this temple was installed and worshipped by Sri Rama and Mata Sita.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm