ಬ್ರೇಕಿಂಗ್ ನ್ಯೂಸ್
20-01-24 07:13 pm HK News Desk ದೇಶ - ವಿದೇಶ
ರಾಮೇಶ್ವರ, ಜ.20: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ಶ್ರೀರಾಮ ರಾಮಾಯಣ ಕಾಲದಲ್ಲಿ ಬಂದು ಹೋಗಿದ್ದ ಸ್ಥಳ, ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಪ್ರಧಾನಿ ಮೋದಿ ಪವಿತ್ರ ಸಮುದ್ರ ಸ್ನಾನ ಮಾಡಿದ್ದಾರೆ.
ಬಳಿಕ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ ಪ್ರಧಾನಿ ಮೋದಿ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ರಾಮೇಶ್ವರದ ಅಗ್ನಿತೀರ್ಥ ಸಮುದ್ರದಲ್ಲಿ ಮೋದಿ ಪವಿತ್ರ ಸ್ನಾನ ಮಾಡಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಜಪಿಸುತ್ತಾ ಮೋದಿ ಪವಿತ್ರ ಸ್ನಾನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಮುದ್ರ ಸ್ನಾನ ಮಾಡಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಮೋದಿ, ಮಂದಿರದ ಆವರಣದಲ್ಲಿ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ್ದಾರೆ.
ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ರಾಮಾಯಣಕ್ಕೂ ನೇರ ಸಂಬಂಧವಿದೆ. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಭಗವಾನ್ ಶ್ರೀರಾಮ ಹಾಗೂ ಸೀತಾದೇವಿ ಪ್ರತಿಷ್ಠಾಪಿಸಿರುವ ಐತಿಹ್ಯವಿದೆ. ಶ್ರೀರಾಮ, ಸೀತಾದೇವಿ ಇದೇ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವ ಕುರಿತು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ.
ಇದಕ್ಕೂ ಮುನ್ನ ಚೆನ್ನೈನಲ್ಲಿ ಪ್ರಧಾನಿ ಮೋದಿ 6ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಅಧಿಕೃತ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಜ.31ರ ವರೆಗೆ ನಡೆಯಲಿದೆ.
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Prime Minister Narendra Modi who is in Tamil Nadu on his 3-day visit to the state performed 'smaran' and offered prayers at Sri Arulmigu Ramanathaswamy Temple in Rameswaram.The main deity worshipped in the temple is Sri Ramanathaswamy, which is a form of Lord Shiva. It is a widely held belief that the main lingam in this temple was installed and worshipped by Sri Rama and Mata Sita.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm