ಬ್ರೇಕಿಂಗ್ ನ್ಯೂಸ್
22-01-24 01:15 pm Hk News Desk ದೇಶ - ವಿದೇಶ
ಅಯೋಧ್ಯೆ, ಜ.22: ಕೋಟಿ ಕಂಗಳ ಕನಸು, ಜಗತ್ತಿನಾದ್ಯಂತ ಭಕ್ತರ ನಿರೀಕ್ಷೆಯಂತೆ ಅಯೋಧ್ಯಾ ಪುರಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ನೆರವೇರಿದೆ.
12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ ಪ್ರವೇಶ ಮಾಡಿದ ಮೋದಿ, ಎರಡು ಮಂಟಪದಲ್ಲಿ ಪೂಜೆ ನೆರವೇರಿಸಿದರು. ಪ್ರತಿಷ್ಠಾ ಕಾರ್ಯ ನೆರವೇರುತ್ತಿದ್ದಂತೆ ಮೊದಲ ಬಾರಿಗೆ ಸರ್ವಾಲಂಕೃತ ಬಾಲರಾಮನ ಮೂರ್ತಿಯನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು.








ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು 11 ಗಂಟೆ ವೇಳೆಗೆ ಆರಂಭಗೊಂಡಿತ್ತು. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ. ಮೋದಿ ಮತ್ತು ಮೋಹನ್ ಭಾಗವತ್ ಸ್ವತಃ ಹೂವಿನ ಅಭಿಷೇಕ ಮತ್ತು ಆರತಿ ಎತ್ತಿ ಪೂಜೆ ನೆರವೇರಿಸಿದ್ದಾರೆ. ಆಚಾರ್ಯ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ ದೀಕ್ಷಿತ್ ನೇತೃತ್ವದಲ್ಲಿ ನೂರಾರು ರಿತ್ವಿಜರು ಪ್ರತಿಷ್ಠಾ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಂಡಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ. ನೂರಾರು ಕಡೆ ಹಿಂದು ಸಂಘಟನೆಗಳ ವತಿಯಿಂದ ರಾಮ ತಾರಕಯಜ್ಞ ನೆರವೇರಿದೆ
‘Mukhya Yajman’ Prime Minister Narendra Modi leads ‘Pran Pratishtha’ rituals at Ram temple inauguration. See pictures from the ceremony here.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm