ಬ್ರೇಕಿಂಗ್ ನ್ಯೂಸ್
22-01-24 01:15 pm Hk News Desk ದೇಶ - ವಿದೇಶ
ಅಯೋಧ್ಯೆ, ಜ.22: ಕೋಟಿ ಕಂಗಳ ಕನಸು, ಜಗತ್ತಿನಾದ್ಯಂತ ಭಕ್ತರ ನಿರೀಕ್ಷೆಯಂತೆ ಅಯೋಧ್ಯಾ ಪುರಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ನೆರವೇರಿದೆ.
12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ ಪ್ರವೇಶ ಮಾಡಿದ ಮೋದಿ, ಎರಡು ಮಂಟಪದಲ್ಲಿ ಪೂಜೆ ನೆರವೇರಿಸಿದರು. ಪ್ರತಿಷ್ಠಾ ಕಾರ್ಯ ನೆರವೇರುತ್ತಿದ್ದಂತೆ ಮೊದಲ ಬಾರಿಗೆ ಸರ್ವಾಲಂಕೃತ ಬಾಲರಾಮನ ಮೂರ್ತಿಯನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು.
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು 11 ಗಂಟೆ ವೇಳೆಗೆ ಆರಂಭಗೊಂಡಿತ್ತು. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ. ಮೋದಿ ಮತ್ತು ಮೋಹನ್ ಭಾಗವತ್ ಸ್ವತಃ ಹೂವಿನ ಅಭಿಷೇಕ ಮತ್ತು ಆರತಿ ಎತ್ತಿ ಪೂಜೆ ನೆರವೇರಿಸಿದ್ದಾರೆ. ಆಚಾರ್ಯ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ ದೀಕ್ಷಿತ್ ನೇತೃತ್ವದಲ್ಲಿ ನೂರಾರು ರಿತ್ವಿಜರು ಪ್ರತಿಷ್ಠಾ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಂಡಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ. ನೂರಾರು ಕಡೆ ಹಿಂದು ಸಂಘಟನೆಗಳ ವತಿಯಿಂದ ರಾಮ ತಾರಕಯಜ್ಞ ನೆರವೇರಿದೆ
‘Mukhya Yajman’ Prime Minister Narendra Modi leads ‘Pran Pratishtha’ rituals at Ram temple inauguration. See pictures from the ceremony here.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm