ಬ್ರೇಕಿಂಗ್ ನ್ಯೂಸ್
23-01-24 09:56 pm HK News Desk ದೇಶ - ವಿದೇಶ
ನವದೆಹಲಿ, ಜ.23: ಬಿಹಾರದ ಮಾಜಿ ಮುಖ್ಯಮಂತ್ರಿ, ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಸಮತಾವಾದ ಪ್ರತಿಪಾದನೆ ಮಾಡಿದ್ದ ಅಗ್ರ ನಾಯಕನಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಬುಧವಾರ ಕರ್ಪೂರಿ ಠಾಕೂರ್ ಅವರ 100ನೇ ಜನ್ಮದಿನಾಚರಣೆ. ಅದಕ್ಕೂ ಮುನ್ನ ರಾಷ್ಟ್ರಪತಿ ಭವನ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದೆ. ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿತ್ತು. ಕೇಂದ್ರ ಸರ್ಕಾರ ಈ ಘೋಷಣೆ ಮಾಡುತ್ತಿದ್ದಂತೆ ಜೆಡಿಯು ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಕರ್ಪೂರಿ ಠಾಕೂರ್ ಬಿಹಾರದ ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರು ಗಳಿಸಿದ್ದರು. ಕರ್ಪೂರಿ ಅವರು ಎರಡು ಬಾರಿ ಬಿಹಾರದ ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು.
ಠಾಕೂರ್ ಅವರಿಗೆ 'ಭಾರತ ರತ್ನ' ಪುರಸ್ಕಾರ ಲಭಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ಸಾಮಾಜಿಕ ನ್ಯಾಯದ ಶ್ರೇಷ್ಠ ಐಕಾನ್ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲು ನಿರ್ಧರಿಸಿದ್ದೇವೆ. ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಈ ನಿರ್ಧಾರ ದೇಶದ ಜನರಿಗೆ ಹೆಮ್ಮೆ ತರುತ್ತದೆ ಎಂದಿದ್ದಾರೆ.
ಅವಕಾಶ ವಂಚಿತರ ಉನ್ನತಿಗಾಗಿ ಕರ್ಪೂರಿ ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯ ನಾಯಕತ್ವವು ಭಾರತದ ಸಾಮಾಜಿಕ-ರಾಜಕೀಯ ಸನ್ನಿವೇಶದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಮಾಜದಲ್ಲಿ ಸಾಮರಸ್ಯವನ್ನು ಇನ್ನಷ್ಟು ಉತ್ತೇಜಿಸಲು ಅವರ ಧ್ಯೇಯವು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Two-time Bihar chief minister Karpoori Thakur, considered the fountainhead of OBC politics in Bihar, has been named for the country's highest civilian award Bharat Ratna posthumously, a Rashtrapati Bhawan communique said on Tuesday on the eve of his birth centenary.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm