ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm