ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm