ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm