ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
10-02-25 10:51 pm
HK News Desk
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 11:09 pm
Mangalore Correspondent
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm