ಬ್ರೇಕಿಂಗ್ ನ್ಯೂಸ್
24-01-24 09:30 pm HK News Desk ದೇಶ - ವಿದೇಶ
ಮಾಸ್ಕೊ, ಜ.24: ಉಕ್ರೇನ್ನ 65 ಯುದ್ಧ ಕೈದಿಗಳು ಸೇರಿದಂತೆ 74 ಜನರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನವು ಉಕ್ರೇನ್ ಬಳಿಯ ಗಡಿ ಪ್ರದೇಶದ ಪ್ರಾಂತ್ಯದಲ್ಲಿ ಬುಧವಾರ ಪತನಗೊಂಡಿದೆ. ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
ಆ ವಿಡಿಯೋದಲ್ಲಿ ಬೆಲ್ಗೊರೊಡ್ ಪ್ರಾಂತ್ಯದಲ್ಲಿ ವಿಮಾನವೊಂದು ಪತನಗೊಂಡು ಆಕಾಶದಿಂದ ಬೀಳುವಂತೆ ಕಂಡುಬರುತ್ತಿದೆ. ಬೆಂಕಿಯ ಬೃಹತ್ ಚೆಂಡು ಸ್ಫೋಟಗೊಂಡಿದ್ದು, ಅದು ನೆಲಕ್ಕೆ ಅಪ್ಪಳಿಸಿದೆ. ಈಗಾಗಲೇ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ಗಳು ಮತ್ತು ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ.
ಯುದ್ಧದಲ್ಲಿ ಸೆರೆಯಾದ ಉಕ್ರೇನ್ನ 65 ಸೈನಿಕರು ಈ ವಿಮಾನದಲ್ಲಿದ್ದರು. ಇವರೊಂದಿಗೆ 6 ವಿಮಾನ ಸಿಬ್ಬಂದಿ ಮತ್ತು 3 ರಕ್ಷಣಾ ಸಿಬ್ಬಂದಿ ಇದ್ದರು. ಕೈದಿಗಳ ಹಸ್ತಾಂತರ ಪ್ರಕ್ರಿಯೆಗಾಗಿ ಇವರನ್ನು ಬೆಲ್ಗೊರೊಡ್ ಪ್ರಾಂತ್ಯದಲ್ಲಿನ ಉಭಯ ರಾಷ್ಟ್ರಗಳ ಗಡಿ ಪ್ರದೇಶಕ್ಕೆ ಕರೆತರಲಾಗುತ್ತಿತ್ತು ಎಂದು ಸೇನೆ ಮಾಹಿತಿ ನೀಡಿದೆ.
ಬೆಲ್ಗೊರೊಡ್ ಪ್ರದೇಶದಲ್ಲಿ ವಿಮಾನದ ಪತನಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೋವ್ ಅವರು ವಿಮಾನದಲ್ಲಿ ಯಾರಿದ್ದರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಅಲ್ಲದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ಉಕ್ರೇನಿಯನ್ ಅಧಿಕಾರಿಗಳು ಇದೇ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸಲಾಗುತ್ತಿತ್ತು. ಅದನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಉಕ್ರೇನ್ನ ಸೇನಾ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.



ಉಕ್ರೇನಿಯನ್ ಸಮಾಜವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಶತ್ರುಗಳು ಉಕ್ರೇನ್ ವಿರುದ್ಧ ವಿಶೇಷ ಕಾರ್ಯಾಚರಣೆಗಳನ್ನು ಸಕ್ರಿಯವಾಗಿ ನಡೆಸುತ್ತಿದ್ದಾರೆ'' ಎಂದು ಎಂದು ಗ್ಲಾಡ್ಕೋವ್ ತನ್ನ ಟೆಲಿಗ್ರಾಮ್ ಚಾನೆಲ್ನಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಸುದ್ದಿಗಾರರೊಂದಿಗೆ ಬೆಳಗ್ಗೆ ಕರೆಯೊಂದರಲ್ಲಿ ಮಾತನಾಡಿರುವ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಅಪಘಾತದ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿಲ್ಲದ ಕಾರಣ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದಿದ್ದರು. ರಕ್ಷಣಾ ಪಡೆಗಳು, ಸರಕು, ಮಿಲಿಟರಿ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ವಿಮಾನವನ್ನು ವಿನ್ಯಾಸಗೊಳಿಸಲಾಗಿದೆ. ರಷ್ಯಾದ ಮಿಲಿಟರಿ ರಫ್ತು ಏಜೆನ್ಸಿ ಪ್ರಕಾರ, ಇದು 225 ಸೈನಿಕರನ್ನು ಒಯ್ಯಬಲ್ಲದು ಎಂಬುದು ತಿಳಿದುಬಂದಿದೆ.
Russia accused Ukraine of downing a Russian military plane in the Belgorod region near the Ukrainian border Wednesday, saying all 74 people on board were killed including dozens of Ukrainian servicemen being transported for a prisoner swap.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm