ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm