ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm