ಬ್ರೇಕಿಂಗ್ ನ್ಯೂಸ್
30-01-24 01:38 pm HK News Desk ದೇಶ - ವಿದೇಶ
ನವದೆಹಲಿ, ಜ.30: ಅಮೆರಿಕದ ಸೇನಾಪಡೆ ಸದ್ಯದಲ್ಲೇ ಇರಾನ್ ಮೇಲೆ ದಾಳಿ ನಡೆಸಲಿದೆ. ಅದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಇರಾನ್ ಪ್ರೇರಿತ ಬಂಡುಕೋರರು ಅಮೆರಿಕದ ನೌಕಾಪಡೆ ಮೇಲೆ ದಾಳಿ ನಡೆಸಿದ್ದು ಮೂವರು ಯೋಧರು ಸಾವನ್ನಪ್ಪಿದ್ದರು. ಕೃತ್ಯದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಬೇಕೆಂದು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರಿಗೆ ರಾಜಕೀಯ ಸಲಹೆಗಾರರು ಒತ್ತಡ ಹೇರಿದ್ದಾರೆ.
ಆದರೆ ಜೋ ಬಿಡೆನ್ ಇನ್ನೂ ಪ್ರತಿ ದಾಳಿಗೆ ಓಕೆ ಎಂದಿಲ್ಲ. ಇಸ್ರೇಲ್- ಹಮಾಸ್ ಸಂಘರ್ಷ ನಡೆಯುತ್ತಿರುವುದರಿಂದ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸುವುದಕ್ಕೆ ಮೀನ ಮೇಷ ಎಣಿಸುತ್ತಿದೆ. ಆದರೆ ಸೇನಾ ಪಡೆ ಮತ್ತು ರಾಜಕೀಯ ತಜ್ಞರು ತೀವ್ರ ಪ್ರತಿದಾಳಿ ನಡೆಸಲೇಬೇಕೆಂದು ಅಧ್ಯಕ್ಷ ಜೋ ಬಿಡೆನ್ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ಅಮೆರಿಕದ ಸೇನಾ ಪಡೆಯ ಮೇಲೆ ಇರಾನ್ ಸೇನಾಪಡೆಯಿಂದಲೇ ಡ್ರೋಣ್ ದಾಳಿಯಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಇರಾನ್ ಹೊರಗಿನ ಸೇನಾಪಡೆ ಮತ್ತು ಬಂಡುಕೋರರ ಮೇಲೆ ಪ್ರತಿದಾಳಿ ನಡೆಸಬೇಕೆಂಬ ಅಭಿಪ್ರಾಯ ಬಲಗೊಳ್ಳುತ್ತಿದೆ.
ಈ ವಿಚಾರದಲ್ಲಿ ಜೋ ಬಿಡೆನ್ ತನ್ನ ರಾಜಕೀಯ ಸಲಹೆಗಾರರ ಜೊತೆಗೆ ಚರ್ಚಿಸುತ್ತಿದ್ದಾರೆ. ಚರ್ಚೆಯ ಬಳಿಕವೇ ಈ ಬಗ್ಗೆ ಜೋ ಬಿಡೆನ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಇತ್ತೀಚೆಗೆ ಇರಾನ್ ದಾಳಿಯ ಬಳಿಕ ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ಅಮೆರಿಕವು, ಇರಾನ್ ಜೊತೆಗೆ ಯುದ್ಧ ಬಯಸುವುದಿಲ್ಲ. ನಾವು ಅತಿಕ್ರಮಣವನ್ನೂ ಮಾಡುವುದಿಲ್ಲ. ಆದರೆ ಏನು ಆಗಬೇಕೋ ಅದನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದವು. ವೈಟ್ ಹೌಸ್ ನಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಕೂಡ ಇದೇ ಮಾತುಗಳನ್ನು ಉಲ್ಲೇಖಿಸಿದ್ದರು. ಇರಾನಿನ ಟೆಹ್ರಾನಲ್ಲಿರುವ ಬಂಡುಕೋರ ಗುಂಪುಗಳೇ ಈ ದಾಳಿ ನಡೆಸಿವೆ. ಇಸ್ಲಾಮಿಕ್ ಉಗ್ರವಾದಿ ಗುಂಪುಗಳಲ್ಲ ಎಂದವರು ಹೇಳಿದ್ದರು.
The United States is reportedly preparing to launch retaliatory attacks against Iran-backed groups, which were allegedly behind the recent drone attack on US troops in Jordan, killing three soldiers. According to Pentagon sources, the retaliation would likely begin in the next couple of days and come in waves against a range of targets once the president gave the go-ahead, Politico reported, citing officials.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm