ಬ್ರೇಕಿಂಗ್ ನ್ಯೂಸ್
30-01-24 03:28 pm HK News Desk ದೇಶ - ವಿದೇಶ
ಲಕ್ನೋ, ಜ.30: ಜ್ಞಾನವಾಪಿ ಮಸೀದಿ ಕುರಿತು ಎಎಸ್ಐ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಉತ್ತರ ಪ್ರದೇಶದ ಸಹರಾನ್ಪುರದ ಜಮಿಯತ್ ಹಿಮಾಯತುಲ್ ಇಸ್ಲಾಂ ಅಧ್ಯಕ್ಷ ಮತ್ತು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಮುಸ್ಲಿಮರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಜ್ಞಾನವಾಪಿ ಕುರಿತಂತೆ ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಐ ಸಮೀಕ್ಷೆ ನಡೆದಿದೆ. ಅದರ ವರದಿಯೂ ಬಂದಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ದೇಶದಲ್ಲಿ ಹಿಂದೂಹ ಮತ್ತು ಮುಸ್ಲಿಮರು ಸಾಮರಸ್ಯದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಜ್ಞಾನವಾಪಿ ವಿವಾದದ ಕುರಿತಂತೆ ಹಿಂದೂಗಳು ಹಾಗೂ ಮುಸ್ಲಿಂ ಸಂಘಟನೆಗಳು ಎರಡೂ ನ್ಯಾಯಾಲಯದ ಮೊರೆ ಹೋಗಿದ್ದವು. ಹೀಗಾಗಿ ವೈಜ್ಞಾನಿಕ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. ಕೋರ್ಟ್ ನಿರ್ದೇಶನದಂತೆ ಜ್ಞಾನವಾಪಿಯಲ್ಲಿ ಎಎಸ್ಐ ಸಮೀಕ್ಷೆ ನಡೆದಿದೆ. ಇದೀಗ ಸಮೀಕ್ಷಾ ವರದಿಯೂ ಬಹಿರಂಗಗೊಂಡಿದೆ. ಈಗ ಮುಸ್ಲಿಮರು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಎಲ್ಲಾ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಕೆಲಸ ಮಾಡಬಾರದು ಎಂದಿದ್ದಾರೆ. ಅದೇ ವಿಷಯ ಮುಸ್ಲಿಮರಿಗೂ ಅನ್ವಯಿಸುತ್ತದೆ. ಯಾವುದೇ ಧಾರ್ಮಿಕ ಸ್ಥಳದಲ್ಲಿ ವಿವಾದ ಉಂಟಾದರೆ ಹಿಂದೂ ಮುಸಲ್ಮಾನರು ಒಗ್ಗೂಡಿ, ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪರಸ್ಪರ ಚರ್ಚೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಶ್ನಿಸುವವರು ಈ ದೇಶವನ್ನು ವಿಘಟಿಸಬೇಕೆಂದು ಪರೋಕ್ಷವಾಗಿ ಹೇಳುತ್ತಿದ್ದಾರೆ. ಅಫ್ಘಾನಿಸ್ತಾನ ಮೊದಲು ಬೇರ್ಪಡಲು ತುಕ್ಡೆ ತುಕ್ಡೆ ಗ್ಯಾಂಗ್ ಕಾರಣವಾಗಿತ್ತು. ನಂತರ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ ಬೇರ್ಪಟ್ಟವು. ಈಗ ಇದೇ ಜನರು ಈ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಅಂತ ಕಳವಳ ವ್ಯಕ್ತಪಡಿಸಿದರು.
Even as the ASI report on the Gyanvapi mosque has sparked a debate, Qari Abrar Jamal, president of Jamiat Himayatul Islam in Saharanpur, Uttar Pradesh, has come up with a piece of advice for Muslims.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm