ಬ್ರೇಕಿಂಗ್ ನ್ಯೂಸ್
30-01-24 03:28 pm HK News Desk ದೇಶ - ವಿದೇಶ
ಲಕ್ನೋ, ಜ.30: ಜ್ಞಾನವಾಪಿ ಮಸೀದಿ ಕುರಿತು ಎಎಸ್ಐ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಉತ್ತರ ಪ್ರದೇಶದ ಸಹರಾನ್ಪುರದ ಜಮಿಯತ್ ಹಿಮಾಯತುಲ್ ಇಸ್ಲಾಂ ಅಧ್ಯಕ್ಷ ಮತ್ತು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಮುಸ್ಲಿಮರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಜ್ಞಾನವಾಪಿ ಕುರಿತಂತೆ ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಐ ಸಮೀಕ್ಷೆ ನಡೆದಿದೆ. ಅದರ ವರದಿಯೂ ಬಂದಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ದೇಶದಲ್ಲಿ ಹಿಂದೂಹ ಮತ್ತು ಮುಸ್ಲಿಮರು ಸಾಮರಸ್ಯದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಜ್ಞಾನವಾಪಿ ವಿವಾದದ ಕುರಿತಂತೆ ಹಿಂದೂಗಳು ಹಾಗೂ ಮುಸ್ಲಿಂ ಸಂಘಟನೆಗಳು ಎರಡೂ ನ್ಯಾಯಾಲಯದ ಮೊರೆ ಹೋಗಿದ್ದವು. ಹೀಗಾಗಿ ವೈಜ್ಞಾನಿಕ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. ಕೋರ್ಟ್ ನಿರ್ದೇಶನದಂತೆ ಜ್ಞಾನವಾಪಿಯಲ್ಲಿ ಎಎಸ್ಐ ಸಮೀಕ್ಷೆ ನಡೆದಿದೆ. ಇದೀಗ ಸಮೀಕ್ಷಾ ವರದಿಯೂ ಬಹಿರಂಗಗೊಂಡಿದೆ. ಈಗ ಮುಸ್ಲಿಮರು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಎಲ್ಲಾ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಕೆಲಸ ಮಾಡಬಾರದು ಎಂದಿದ್ದಾರೆ. ಅದೇ ವಿಷಯ ಮುಸ್ಲಿಮರಿಗೂ ಅನ್ವಯಿಸುತ್ತದೆ. ಯಾವುದೇ ಧಾರ್ಮಿಕ ಸ್ಥಳದಲ್ಲಿ ವಿವಾದ ಉಂಟಾದರೆ ಹಿಂದೂ ಮುಸಲ್ಮಾನರು ಒಗ್ಗೂಡಿ, ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪರಸ್ಪರ ಚರ್ಚೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಶ್ನಿಸುವವರು ಈ ದೇಶವನ್ನು ವಿಘಟಿಸಬೇಕೆಂದು ಪರೋಕ್ಷವಾಗಿ ಹೇಳುತ್ತಿದ್ದಾರೆ. ಅಫ್ಘಾನಿಸ್ತಾನ ಮೊದಲು ಬೇರ್ಪಡಲು ತುಕ್ಡೆ ತುಕ್ಡೆ ಗ್ಯಾಂಗ್ ಕಾರಣವಾಗಿತ್ತು. ನಂತರ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ ಬೇರ್ಪಟ್ಟವು. ಈಗ ಇದೇ ಜನರು ಈ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಅಂತ ಕಳವಳ ವ್ಯಕ್ತಪಡಿಸಿದರು.
Even as the ASI report on the Gyanvapi mosque has sparked a debate, Qari Abrar Jamal, president of Jamiat Himayatul Islam in Saharanpur, Uttar Pradesh, has come up with a piece of advice for Muslims.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm