ಬ್ರೇಕಿಂಗ್ ನ್ಯೂಸ್
31-01-24 04:52 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜ 31: ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ದಾಳಿ ನಡೆಸಲಾಗಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದೆ ಆದರೆ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ದೃಶ್ಯಗಳು ರಾಹುಲ್ ಗಾಂಧಿಯವರು ತಮ್ಮ ವಾಹನದಿಂದ ಹೊರಬಂದ ನಂತರ ಹಾನಿಗೊಳಗಾದ ಭಾಗವನ್ನು ಪರಿಶೀಲಿಸುತ್ತಿರುವುದನ್ನು ತೋರಿಸಿದೆ
ರಾಹುಲ್ ಗಾಂಧಿ ಅವರ ಭಾರತ್ ಜೊಡೋ ಯಾತ್ರೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಎಂಟ್ರಿ ಕೊಟ್ಟ ಹೊತ್ತಲ್ಲೇ ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಪಕ್ಷದ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ಮಾಡುವ ನಿಲುವು ಪ್ರಕಟಿಸಿದರು. ಇಂಡಿ ಮೈತ್ರಿ ಕೂಟದಲ್ಲಿ ಅಂಗ ಪಕ್ಷ ಆಗಿದ್ರೂ ಕೂಡಾ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾತುಕತೆ ನಡೆಸದೇ ಏಕಾಏಕಿಯಾಗಿ ಪಶ್ಚಿಮ ಬಂಗಾಳದ ಎಲ್ಲಾ ಕ್ಷೇತ್ರಗಳಲೂ ಏಕಾಂಗಿ ಸ್ಪರ್ಧೆ ಮಾಡೋದಾಗಿ ಸಿಎಂ ಮಮತಾ ಬ್ಯಾನರ್ಜಿ ಪ್ರಕಟಿಸುವ ಮೂಲಕ ಕಾಂಗ್ರೆಸ್ ವಿರುದ್ಧ ನೇರಾನೇರ ಸಮರಕ್ಕೆ ನಿಂತರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಗುಂಪಿನಲ್ಲಿ ಇರುವವರು ಯಾರೋ ಒಬ್ಬರು ದಾಳಿ ನಡೆಸಿಬಹುದು ಎಂದಿದ್ದಾರೆ. ಇದೊಂದು ಸಣ್ಣ ಘಟನೆ. ಆದರೆ ಗಂಭೀರ ಸ್ವರೂಪದ ದಾಳಿಯೂ ಆಗಬಹುದಿತ್ತು ಎಂದು ಚೌಧರಿ ಹೇಳಿದ್ದಾರೆ.
ಇತ್ತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಬುಧವಾರ ಮಾಲ್ಡಾದಲ್ಲೇ ಇದ್ದಾರೆ. ಜನೋಸಂಜೋಗ್ ಯಾತ್ರೆಯನ್ನು ಅವರು ನಡೆಸುತ್ತಿದ್ದಾರೆ. ಈ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ನಾನು ರಾಜಕೀಯದ ಬಗ್ಗೆ ಅತಿ ವಿರಳವಾಗಿ ಮಾತನಾಡುತ್ತೇನೆ. ಆದರೆ ಕೆಲವು ಪಕ್ಷಗಳ ನಾಯಕರು ಚುನಾವಣೆ ಬಂದರೆ ಸಾಕು ಕೋಗಿಲೆಗಳ ರೀತಿ ಕೂಗಲು ಶುರು ಮಾಡುತ್ತಾರೆ. ಆದರೆ ನಮ್ಮ ಹೋರಾಟ ಏನಿದ್ದರೂ ಬಿಜೆಪಿ ಜೊತೆ. ನಾವು ಈ ಹೋರಾಟವನ್ನ ಏಕಾಂಗಿಯಾಗಿ ಮಾಡುತ್ತೇವೆ. ಬಿಜೆಪಿಯನ್ನು ಸೋಲಿಸಲು ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಮಮತಾ ಬ್ಯಾನರ್ಜಿ ಹೇಳಿದರು.
A car in which Rahul Gandhi was travelling in West Bengal's Malda district as part of 'Bharat Jodo Nyay Yatra' was pelted with stones by unidentified persons on Wednesday, claimed state party chief Adhir Ranjan Chowdhury. The rear window pane of the vehicle was smashed in the incident but Gandhi did not suffer any injury.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm