ಬ್ರೇಕಿಂಗ್ ನ್ಯೂಸ್
02-02-24 08:01 pm HK News Desk ದೇಶ - ವಿದೇಶ
ನವದೆಹಲಿ, ಫೆ.2: ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼ ವಿವಾದ ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಂಗ್ರೆಸ್ ಬಹಿರಂಗ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.
ಡಿಕೆ ಸುರೇಶ್ ಹೇಳಿಕೆ ಬಗ್ಗೆ ರಾಜ್ಯಸಭೆಯಲ್ಲಿ ಸಚಿವ ಪಿಯೂಶ್ ಗೋಯಲ್ ಪ್ರಸ್ತಾಪಿಸಿ, ದೇಶದ ಸಾರ್ವಭೌಮತ್ವ ಬಗ್ಗೆ ಕಾಂಗ್ರೆಸ್ ಸಂಸದ ಪ್ರಶ್ನೆ ಮಾಡಿದ್ದಾರೆ. ದೇಶ ವಿಭಜನೆಯ ಮಾತನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕರಾಗಲೀ, ಅದೇ ಪಕ್ಷದ ನಾಯಕರಾಗಲೀ ಡಿಕೆ ಸುರೇಶ್ ಹೇಳಿಕೆ ಬಗ್ಗೆ ಖಂಡನೆ ವ್ಯಕ್ತಪಡಿಸಿಲ್ಲ ಎಂದು ಸದನದ ಗಮನಕ್ಕೆ ತಂದರಲ್ಲದೆ, ಸಂಸದನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಲೋಕಸಭೆಯಲ್ಲಿ ಸಚಿವ ಪ್ರಹ್ಲಾದ ಜೋಷಿ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಸಂಸದ ದೇಶ ವಿಭಜನೆಯ ಮಾತುಗಳನ್ನಾಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ. ದೇಶದ ಸಾರ್ವಭೌಮತ್ವ ವಿರುದ್ಧ ಮಾತನ್ನಾಡಿದ್ದು ಈ ಬಗ್ಗೆ ಸಂಸತ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಲೋಕಸಭೆ ಸಂಸದರಾಗಿ ಈ ದೇಶವನ್ನು ಒಡೆಯುವ ಮಾತನಾಡಿದ್ದನ್ನು ತೀವ್ರವಾಗಿ ಖಂಡಿಸುತ್ತೇನೆ. ದೇಶದ ಏಕತೆ ಮತ್ತು ಸಾರ್ವಭೌಮತ್ವದ ಮುಂದೆ ಯಾವುದೂ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಕ್ಷೇಪ ವ್ಯಕ್ತಪಡಿಸಿದರು.
ಆಡಳಿತ ಪಕ್ಷದ ನಾಯಕರ ಆಕ್ಷೇಪದ ಬಗ್ಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಯಾರೇ ಆದರೂ ದೇಶ ಒಡೆಯುವ ಬಗ್ಗೆ ಮಾತನಾಡಿದರೆ ನಾವು ಅದನ್ನು ಎಂದಿಗೂ ಸಹಿಸುವುದಿಲ್ಲ. ಅವರು ಯಾವುದೇ ಪಕ್ಷದವರಾಗಿರಲಿ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಾವು ಒಂದೇ. ಭಾರತ ಅಖಂಡವಾಗಿರಲಿದೆ. ಡಿಕೆ ಸುರೇಶ್ ಏನು ಮಾತನಾಡಿದ್ದಾರೋ ಗೊತ್ತಿಲ್ಲ. ತಪ್ಪು ಆಗಿದ್ದರೆ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಸಂಸದ ಡಿಕೆ ಸುರೇಶ್, ಬಜೆಟ್ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ತಾರತಮ್ಯ ಆಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ಹೇಳಿದ್ದರು.
Union Minister Piyush Goyal on Friday during the Parliament Budget Session raised the issue of the statement made by Congress Member of Parliament (MP) DK Suresh where he is asking for a separate country after the interim budget was presented by the Finance Minister on February 1.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm