ಬ್ರೇಕಿಂಗ್ ನ್ಯೂಸ್
07-02-24 01:32 pm HK News Desk ದೇಶ - ವಿದೇಶ
ಕಾಸರಗೋಡು, ಫೆ.7: ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು.
ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ಪ್ರಾಂತ ಪ್ರಚಾರಕ್ ನಂದೀಶ್, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಹಲವಾರು ಆರೆಸ್ಸೆಸ್, ಬಿಜೆಪಿ ಪ್ರಮುಖರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
Kasaragod Rss leader Gopal Chettiyar dies at 77.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm