ಬ್ರೇಕಿಂಗ್ ನ್ಯೂಸ್
12-02-24 08:44 pm HK News Desk ದೇಶ - ವಿದೇಶ
ಮಥುರಾ, ಫೆ 12: ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡ ಘಟನೆ ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಬಸ್ ಮತ್ತು ಕಾರು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಮುಂದೆ ತೆರಳುತ್ತಿದ್ದ ಬಸ್ನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ, ಹಿಂದಿನಿಂದ ಬಂದ ಕಾರು ಕೂಡ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಹೇಗೋ ಕಿಟಕಿಯಿಂದ ಹೊರಗೆ ಬಂದು ಪ್ರಾಣ ಉಳಿಸಿಕೊಂಡರೆ, ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಬೆಂಕಿಯನ್ನು ನಿಯಂತ್ರಿಸಲು ಸುಮಾರು ಒಂದು ಗಂಟೆಗಳ ಕಾಲ ಹರಸಾಹಪಟ್ಟರು. ಆದರೆ, ಅವರು ಬರುವಷ್ಟರಲ್ಲೇ ಬೆಂಕಿಯ ಜ್ವಾಲೆ ಎರಡೂ ವಾಹನಗಳನ್ನು ಸುತ್ತುವರೆದಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿ ಮೂಲಕ ಪ್ರಾಣಾಪಾಯದಿಂದ ಪಾರಾದರೆ, ಕಾರಿನಲ್ಲಿದ್ದವರು ಹೊರಬರಲು ಸಾಧ್ಯವಾಗದೇ ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ಅಪಘಾತದಿಂದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ ಕೂಡ ನೀಡಿದ್ದಾರೆ.
Five people were charred to death after their car collided with a private bus on the Yamuna Expressway in Uttar Pradesh’s Mathura early on Monday. According to the police, the accident took place around 8 am in the Mahavan police station area and the car and the sleeper coach were completely burnt after they collided.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
28-07-25 10:51 am
Mangalore Correspondent
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm