ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm