ಬ್ರೇಕಿಂಗ್ ನ್ಯೂಸ್
15-02-24 11:14 pm HK NEWS ದೇಶ - ವಿದೇಶ
ಪಾಟ್ನಾ, ಫೆ.15: ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ಮಹಿಳೆಯನ್ನು ಅಂತ್ಯ ಸಂಸ್ಕಾರಕ್ಕಾಗಿ ಒಯ್ಯುತ್ತಿದ್ದಾಗ ದಿಢೀರ್ ಆಗಿ ಬದುಕಿ ಬಂದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತದೇಹವನ್ನು ಛತ್ತೀಸ್ಗಢದಿಂದ ಬಿಹಾರಕ್ಕೆ ತರುವಾಗ 18 ಗಂಟೆ ಪ್ರಯಾಣ ತಗಲಿತ್ತು. ಪ್ರಯಾಣದ ಬಳಿಕ ಆಕೆ ಏಕಾಏಕಿ ಮಾರ್ಗಮಧ್ಯೆ ಮಹಿಳೆ ಜೀವ ಪಡೆದಿದ್ದು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ರಾಮವತಿ ದೇವಿ ಎಂಬ ಮಹಿಳೆ ಈ ರೀತಿ ಮರುಜನ್ಮ ಪಡೆದಾಕೆ. ಈಕೆ ಬಿಹಾರದ ಬೇಗುಸರಾಯ್ ಜಿಲ್ಲೆಯ ನೀಮಾ ಚಂದ್ಪುರ ಗ್ರಾಮದ ನಿವಾಸಿ. ತನ್ನ ಇಬ್ಬರು ಮಕ್ಕಳಾದ ಮುರಾರಿ ಶಾವೋ ಮತ್ತು ಘನಶ್ಯಾಮ್ ಶಾವೋ ಜೊತೆ ಇತ್ತೀಚೆಗೆ ಛತ್ತೀಸ್ಗಢಕ್ಕೆ ತೆರಳಿದ್ದರು. ಫೆಬ್ರವರಿ 11 ರಂದು ರಾಮವತಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಕ್ಷಣವೇ ಆಕೆಯನ್ನು ಕೊರ್ವಾ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದರು.
ಪುತ್ರರಿಬ್ಬರು ತಾಯಿಯನ್ನು ತಮ್ಮೂರಿಗೆ ತಂದು ಅಂತ್ಯಸಂಸ್ಕಾರ ಮಾಡಲು ಬಯಸಿದ್ದು, ಅದರಂತೆ ಬಿಹಾರಕ್ಕೆ ಶವವನ್ನು ವಾಪಸ್ ತರುತ್ತಿದ್ದರು. ಫೆಬ್ರವರಿ 12 ರಂದು ಖಾಸಗಿ ವಾಹನದಲ್ಲಿ ದೇಹವನ್ನು ಬೇಗುಸರೈಗೆ ತರಲಾಗುತ್ತಿತ್ತು. ಛತ್ತೀಸ್ಗಢದಿಂದ 18 ಗಂಟೆಗಳ ಪ್ರಯಾಣದ ನಂತರ ಬಿಹಾರದ ಔರಂಗಾಬಾದ್ ತಲುಪಿದಾಗ ಅಚ್ಚರಿ ಎಂಬಂತೆ ರಾಮವತಿ ಇದ್ದಕ್ಕಿದ್ದಂತೆ ಎದ್ದು ಕುಳಿತಿದ್ದಾರೆ.
ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ರಸ್ತೆ ಬದಿ ವಾಹನ ನಿಲ್ಲಿಸಿ ಆಕೆಯನ್ನು ಭಯದಿಂದಲೇ ಪರೀಕ್ಷಿಸಿದ್ದಾರೆ. ಮಹಿಳೆ ಜೀವಂತವಾಗಿರುವುದನ್ನು ಕಂಡುಕೊಂಡ ಅವರು ಬೇಗುಸರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆಕೆಯನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ವಾಹನದಲ್ಲಿ ಕರೆತರುತ್ತಿದ್ದಾಗ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಆಗಿ ಮಹಿಳೆ ಬದುಕಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ, ವಾಹನ ಅಲುಗಾಡಿದಾಗ ದೇಹ ಕುಲುಕಿ ಮಹಿಳೆಗೆ ಉಸಿರಾಟ ಮರು ಆರಂಭವಾಗಿದೆ. ಹೃದಯಸ್ತಂಭನ ಉಂಟಾದಾಗ ಸಿಪಿಆರ್ ಮಾಡಲಾಗುತ್ತದೆ. ಅದಿಲ್ಲಿ ಸಹಜವಾಗಿ ಆಗಿದೆ ಎಂದಿದ್ದಾರೆ.
An elderly woman who was declared dead in Chhattisgarh, miraculously came back to life as soon as she entered her native state Bihar.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm