ಬ್ರೇಕಿಂಗ್ ನ್ಯೂಸ್
15-02-24 11:14 pm HK NEWS ದೇಶ - ವಿದೇಶ
ಪಾಟ್ನಾ, ಫೆ.15: ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ಮಹಿಳೆಯನ್ನು ಅಂತ್ಯ ಸಂಸ್ಕಾರಕ್ಕಾಗಿ ಒಯ್ಯುತ್ತಿದ್ದಾಗ ದಿಢೀರ್ ಆಗಿ ಬದುಕಿ ಬಂದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತದೇಹವನ್ನು ಛತ್ತೀಸ್ಗಢದಿಂದ ಬಿಹಾರಕ್ಕೆ ತರುವಾಗ 18 ಗಂಟೆ ಪ್ರಯಾಣ ತಗಲಿತ್ತು. ಪ್ರಯಾಣದ ಬಳಿಕ ಆಕೆ ಏಕಾಏಕಿ ಮಾರ್ಗಮಧ್ಯೆ ಮಹಿಳೆ ಜೀವ ಪಡೆದಿದ್ದು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ರಾಮವತಿ ದೇವಿ ಎಂಬ ಮಹಿಳೆ ಈ ರೀತಿ ಮರುಜನ್ಮ ಪಡೆದಾಕೆ. ಈಕೆ ಬಿಹಾರದ ಬೇಗುಸರಾಯ್ ಜಿಲ್ಲೆಯ ನೀಮಾ ಚಂದ್ಪುರ ಗ್ರಾಮದ ನಿವಾಸಿ. ತನ್ನ ಇಬ್ಬರು ಮಕ್ಕಳಾದ ಮುರಾರಿ ಶಾವೋ ಮತ್ತು ಘನಶ್ಯಾಮ್ ಶಾವೋ ಜೊತೆ ಇತ್ತೀಚೆಗೆ ಛತ್ತೀಸ್ಗಢಕ್ಕೆ ತೆರಳಿದ್ದರು. ಫೆಬ್ರವರಿ 11 ರಂದು ರಾಮವತಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಕ್ಷಣವೇ ಆಕೆಯನ್ನು ಕೊರ್ವಾ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದರು.
ಪುತ್ರರಿಬ್ಬರು ತಾಯಿಯನ್ನು ತಮ್ಮೂರಿಗೆ ತಂದು ಅಂತ್ಯಸಂಸ್ಕಾರ ಮಾಡಲು ಬಯಸಿದ್ದು, ಅದರಂತೆ ಬಿಹಾರಕ್ಕೆ ಶವವನ್ನು ವಾಪಸ್ ತರುತ್ತಿದ್ದರು. ಫೆಬ್ರವರಿ 12 ರಂದು ಖಾಸಗಿ ವಾಹನದಲ್ಲಿ ದೇಹವನ್ನು ಬೇಗುಸರೈಗೆ ತರಲಾಗುತ್ತಿತ್ತು. ಛತ್ತೀಸ್ಗಢದಿಂದ 18 ಗಂಟೆಗಳ ಪ್ರಯಾಣದ ನಂತರ ಬಿಹಾರದ ಔರಂಗಾಬಾದ್ ತಲುಪಿದಾಗ ಅಚ್ಚರಿ ಎಂಬಂತೆ ರಾಮವತಿ ಇದ್ದಕ್ಕಿದ್ದಂತೆ ಎದ್ದು ಕುಳಿತಿದ್ದಾರೆ.
ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ರಸ್ತೆ ಬದಿ ವಾಹನ ನಿಲ್ಲಿಸಿ ಆಕೆಯನ್ನು ಭಯದಿಂದಲೇ ಪರೀಕ್ಷಿಸಿದ್ದಾರೆ. ಮಹಿಳೆ ಜೀವಂತವಾಗಿರುವುದನ್ನು ಕಂಡುಕೊಂಡ ಅವರು ಬೇಗುಸರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆಕೆಯನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ವಾಹನದಲ್ಲಿ ಕರೆತರುತ್ತಿದ್ದಾಗ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಆಗಿ ಮಹಿಳೆ ಬದುಕಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ, ವಾಹನ ಅಲುಗಾಡಿದಾಗ ದೇಹ ಕುಲುಕಿ ಮಹಿಳೆಗೆ ಉಸಿರಾಟ ಮರು ಆರಂಭವಾಗಿದೆ. ಹೃದಯಸ್ತಂಭನ ಉಂಟಾದಾಗ ಸಿಪಿಆರ್ ಮಾಡಲಾಗುತ್ತದೆ. ಅದಿಲ್ಲಿ ಸಹಜವಾಗಿ ಆಗಿದೆ ಎಂದಿದ್ದಾರೆ.
An elderly woman who was declared dead in Chhattisgarh, miraculously came back to life as soon as she entered her native state Bihar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm