ಬ್ರೇಕಿಂಗ್ ನ್ಯೂಸ್
18-02-24 01:27 pm HK News Desk ದೇಶ - ವಿದೇಶ
ನವದೆಹಲಿ, ಫೆ.18: ಉತ್ತರ ಭಾರತದಲ್ಲಿ ನೆಲೆಸಿದ್ದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಆಚರಿಸಿ ದೇಹತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯ ದಿನಗಳನ್ನು ಕಳೆದಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದ ಅವರು ಆಮೂಲಕ ಜೀವಾಂತ್ಯ ಮಾಡಿದ್ದಾರೆ.

ಆಚಾರ್ಯರು ಕೊನೆಯ ಉಸಿರಿನ ವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಮುನಿಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಜೈನ ಧರ್ಮದ ವಿಧಿಗಳ ಪ್ರಕಾರ ನಡೆಯಲಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದ್ದ ಆಚಾರ್ಯರು ರಾಜಸ್ಥಾನದಲ್ಲಿ ಮುನಿ ದೀಕ್ಷೆ ಪಡೆದಿದ್ದರು. 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ಗುರು ಆಚಾರ್ಯ ಶ್ರೀ ಜ್ಞಾನಸಾಗರ್ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದಿದ್ದರು.

ಆಚಾರ್ಯರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದು ನೆಲೆಸಿದ್ದರು. ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್ಖಂಡದಲ್ಲಿ ಕಳೆದಿದ್ದು ಆಚಾರ್ಯರು ತಮ್ಮ ಜೀವನದಲ್ಲಿ ಸುಮಾರು 350 ಮಂದಿಗೆ ದೀಕ್ಷೆ ನೀಡಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣತರಾಗಿದ್ದರು. ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ. ಆಚಾರ್ಯರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Renowned Jain seer Acharya Vidyasagar Maharaj breathed his last on Sunday at Chandragiri Teerth in Dongargarh in Chhattisgarh's Rajnandgaon district after undertaking 'sallekhna'. Sallekhna is a Jain religious practice involving voluntary fasting unto death for spiritual purification, a statement from the teerth said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm