ಬ್ರೇಕಿಂಗ್ ನ್ಯೂಸ್
18-02-24 01:27 pm HK News Desk ದೇಶ - ವಿದೇಶ
ನವದೆಹಲಿ, ಫೆ.18: ಉತ್ತರ ಭಾರತದಲ್ಲಿ ನೆಲೆಸಿದ್ದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಆಚರಿಸಿ ದೇಹತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯ ದಿನಗಳನ್ನು ಕಳೆದಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದ ಅವರು ಆಮೂಲಕ ಜೀವಾಂತ್ಯ ಮಾಡಿದ್ದಾರೆ.

ಆಚಾರ್ಯರು ಕೊನೆಯ ಉಸಿರಿನ ವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಮುನಿಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಜೈನ ಧರ್ಮದ ವಿಧಿಗಳ ಪ್ರಕಾರ ನಡೆಯಲಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದ್ದ ಆಚಾರ್ಯರು ರಾಜಸ್ಥಾನದಲ್ಲಿ ಮುನಿ ದೀಕ್ಷೆ ಪಡೆದಿದ್ದರು. 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ಗುರು ಆಚಾರ್ಯ ಶ್ರೀ ಜ್ಞಾನಸಾಗರ್ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದಿದ್ದರು.

ಆಚಾರ್ಯರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದು ನೆಲೆಸಿದ್ದರು. ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್ಖಂಡದಲ್ಲಿ ಕಳೆದಿದ್ದು ಆಚಾರ್ಯರು ತಮ್ಮ ಜೀವನದಲ್ಲಿ ಸುಮಾರು 350 ಮಂದಿಗೆ ದೀಕ್ಷೆ ನೀಡಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣತರಾಗಿದ್ದರು. ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ. ಆಚಾರ್ಯರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Renowned Jain seer Acharya Vidyasagar Maharaj breathed his last on Sunday at Chandragiri Teerth in Dongargarh in Chhattisgarh's Rajnandgaon district after undertaking 'sallekhna'. Sallekhna is a Jain religious practice involving voluntary fasting unto death for spiritual purification, a statement from the teerth said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm