ಬ್ರೇಕಿಂಗ್ ನ್ಯೂಸ್
21-02-24 11:47 am HK News Desk ದೇಶ - ವಿದೇಶ
ನವದೆಹಲಿ, ಫೆ 21: ಎಂಎಸ್ಪಿ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ಮಾಡಬೇಡಿ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಪ್ರಧಾನಿ ಮೋದಿಗೆ ಬುಧವಾರ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು ರೈತರೇ ಮೋದಿಯನ್ನ ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ನಮ್ಮ ಮೇಲೆ ದಬ್ಬಾಳಿಕೆ ನಡೆಸಬೇಡಿ, ಬಿಜೆಪಿ ನೇತೃತ್ವದ ಕೇಂದ್ರವನ್ನು ದೇಶ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.
ಬೃಹತ್ ಪ್ರತಿಭಟನೆಯನ್ನು ಸಂಯೋಜಿಸುತ್ತಿರುವ ಪಂಧೇರ್, ತಮ್ಮ ಮೆರವಣಿಗೆಯನ್ನು ತಡೆಯಲು ಹರಿಯಾಣದ ಹಳ್ಳಿಗಳಲ್ಲಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂತಹ ಸರ್ಕಾರವನ್ನು ದೇಶ ಕ್ಷಮಿಸುವುದಿಲ್ಲ…ಹರಿಯಾಣದ ಹಳ್ಳಿಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಿ ನಮ್ಮ ಪ್ರತಿಭಟನೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ನಾವೇನು ಅಪರಾಧ ಮಾಡಿದ್ದೇವೆ? ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದ್ದು ನಾವೇ.. ಈಗ ನಮ್ಮ ಮೇಲೆ ಸೇನಾ ಪಡೆಗಳನ್ನು ಕಳುಹಿಸಿ ದಬ್ಬಾಳಿಕೆ ಮಾಡುತಿದ್ದೀರಿ. ನಾವು ಶಾಂತ ರೀತಿಯಲ್ಲಿ ದೆಹಲಿಯತ್ತ ತೆರಳಿ ಪ್ರತಿಭಟನೆ ನಡೆಸುವ ನಿರ್ಧಾರವನ್ನು ನಾವು ಮಾಡಲು ನಿಂತಿದ್ದೇವೆ ಅದನ್ನು ನೀವು ತಡೆಯಲು ಯತ್ನಿಸುತ್ತಿದ್ದೀರಿ ಎಂದು ಕಿಡಿಕಾರಿದರು.
ಕೇಂದ್ರ ನಡೆಸಿದ ಹಲವು ಸಭೆಗಳಲ್ಲಿ ನಾವು ಭಾಗವಹಿಸಿದ್ದೇವೆ, ಪ್ರತಿಯೊಂದು ಅಂಶವನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಇದರ ಬಗ್ಗೆ ಈಗ ಕೇಂದ್ರ ಸರ್ಕಾರವು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ನಾವು ಶಾಂತರಾಗಿರುತ್ತೇವೆ, ಪ್ರಧಾನಿ ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. 1.5-2 ಲಕ್ಷ ಕೋಟಿ ದೊಡ್ಡ ಮೊತ್ತವಲ್ಲ...ಈ ಅಡೆತಡೆಗಳನ್ನು ತೆಗೆದು ದೆಹಲಿಯತ್ತ ಸಾಗಲು ಅವಕಾಶ ನೀಡಬೇಕು ಎಂದು ಹೇಳಿದರು.
ನಿನ್ನೆ, ಪಂಜಾಬ್-ಹರಿಯಾಣ ಶಂಭು ಗಡಿಯಿಂದ ರೈತರು ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಸಂಧು ಘೋಷಿಸಿದರು. ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು ವರ್ಷಗಳ ಕಾಲ ಸರ್ಕಾರಿ ಸಂಸ್ಥೆಗಳಿಂದ ಎಂಎಸ್ಪಿ ದರದಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾವನೆಯನ್ನು ರೈತರು ತಿರಸ್ಕರಿಸಿದ ಗಂಟೆಗಳ ನಂತರ ಅವರು ಈ ಹೇಳಿಕೆಯನ್ನು ನೀಡಿದರು
ಈಗಾಗಲೇ ಶಂಭು ಗಡಿಯಲ್ಲಿ 1,170 ಟ್ರ್ಯಾಕ್ಟರ್ಗಳು, ಖನೌರಿುಲ್ಲಿ 870 ಟ್ರ್ಯಾಕ್ಟರ್ಗಳನ್ನು ನಿಯೋಜಿಸಲಾಗಿದೆ.
Thousands of farmers from Punjab will resume their 'Delhi Chalo' march today, to press for their demand of MSP support for all crops. The protesting farmers, who are currently camping at the Haryana-Punjab Shambhu border, announced resumption of the agitation on Tuesday after the fourth round of talks with the central government failed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm