ಬ್ರೇಕಿಂಗ್ ನ್ಯೂಸ್
23-02-24 11:56 am HK News Desk ದೇಶ - ವಿದೇಶ
ಹೈದರಾಬಾದ್, ಫೆ.23: ತೆಲಂಗಾಣ ರಾಜ್ಯದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರವನ್ನು ಬಿಆರ್ ಎಸ್ ಪಕ್ಷದಿಂದ ಪ್ರತಿನಿಧಿಸುವ ಯುವ ಶಾಸಕಿ ಜಿ.ಲಾಸ್ಯ ನಂದಿತಾ ಶುಕ್ರವಾರ ಬೆಳಗ್ಗೆ ಹೈದರಾಬಾದ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಪತಂಚೇರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಾಫಿಕ್ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಶಾಸಕಿ ಲಾಸ್ಯ ನಂದಿತಾ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ವಾಹನ ನಿಯಂತ್ರಣ ಕಳೆದುಕೊಂಡು ಔಟರ್ ರಿಂಗ್ ರಸ್ತೆಯ ಎಡಭಾಗದ ಬ್ಯಾರಿಕೇಡ್ಗೆ ಡಿಕ್ಕಿಯಾಗಿದೆ. 37 ವರ್ಷದ ಬಿಆರ್ಎಸ್ ಶಾಸಕಿ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಲಾಸ್ಯ ತಲೆಗೆ ತೀವ್ರವಾದ ಪೆಟ್ಟು ಬಿದ್ದಿರುವುದನ್ನು ತೋರಿಸಿದೆ. ಶಾಸಕಿ ಲಾಸ್ಯ ನಂದಿತಾ ಕಾರಿನ ಎರಡನೇ ಸಾಲಿನ ಸೀಟಿನಲ್ಲಿ ಕುಳಿತಿದ್ದರು. ಇತ್ತೀಚೆಗಷ್ಟೇ ಲಾಸ್ಯ ನಂದಿತಾ ಅವರು ಬಿಆರ್ಎಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನಲ್ಗೊಂಡಾಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ನಲ್ಗೊಂಡ ಜಿಲ್ಲೆಯ ನಾರ್ಕೆಟ್ಪಲ್ಲಿಯಲ್ಲಿ ಫೆ.13ರಂದು ನಡೆದ ಘಟನೆಯಲ್ಲಿ ಗೃಹರಕ್ಷಕ ಜಿ ಕಿಶೋರ್ ಅವರಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಓವರ್ಲೋಡ್ ಆಗಿದ್ದ ಲಿಫ್ಟ್ ನೆಲಮಾಳಿಗೆಗೆ ಬಿದ್ದ ಘಟನೆಯಲ್ಲಿಯೂ ಅವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.
ಶಾಸಕಿ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಐದು ಬಾರಿ ಬಿಆರ್ಎಸ್ ಶಾಸಕರಾಗಿದ್ದ ಜಿ ಸಾಯಣ್ಣ ಅವರ ಮಗಳು. ಕಳೆದ ವರ್ಷ ಫೆಬ್ರವರಿ 19 ರಂದು ತಮ್ಮ 72ನೇ ವಯಸ್ಸಿನಲ್ಲಿ ಸಾಯಣ್ಣ ನಿಧನರಾಗಿದ್ದರು. ಸಾಯಣ್ಣ ಮರಣದ ನಂತರ, ನವೆಂಬರ್ 2023 ರಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಅವರ ಮಗಳು ಲಾಸ್ಯಾರನ್ನು ಕಣಕ್ಕಿಳಿಸಲಾಗಿತ್ತು.
Bharat Rashtra Samithi (BRS) MLA Lasya Nanditha died in a road accident on Nehru Outer Ring Road (ORR) near Patancheru in Telangana's Sangareddy on Friday morning. Nanditha represented the Secunderabad Cantonment Assembly constituency. According to reports, her driver lost control of the car and hit the divider at the Aminpur Sultanpur ORR in the Sangareddy district.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm