ಬ್ರೇಕಿಂಗ್ ನ್ಯೂಸ್
23-02-24 11:56 am HK News Desk ದೇಶ - ವಿದೇಶ
ಹೈದರಾಬಾದ್, ಫೆ.23: ತೆಲಂಗಾಣ ರಾಜ್ಯದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರವನ್ನು ಬಿಆರ್ ಎಸ್ ಪಕ್ಷದಿಂದ ಪ್ರತಿನಿಧಿಸುವ ಯುವ ಶಾಸಕಿ ಜಿ.ಲಾಸ್ಯ ನಂದಿತಾ ಶುಕ್ರವಾರ ಬೆಳಗ್ಗೆ ಹೈದರಾಬಾದ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಪತಂಚೇರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಾಫಿಕ್ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಶಾಸಕಿ ಲಾಸ್ಯ ನಂದಿತಾ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ವಾಹನ ನಿಯಂತ್ರಣ ಕಳೆದುಕೊಂಡು ಔಟರ್ ರಿಂಗ್ ರಸ್ತೆಯ ಎಡಭಾಗದ ಬ್ಯಾರಿಕೇಡ್ಗೆ ಡಿಕ್ಕಿಯಾಗಿದೆ. 37 ವರ್ಷದ ಬಿಆರ್ಎಸ್ ಶಾಸಕಿ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಲಾಸ್ಯ ತಲೆಗೆ ತೀವ್ರವಾದ ಪೆಟ್ಟು ಬಿದ್ದಿರುವುದನ್ನು ತೋರಿಸಿದೆ. ಶಾಸಕಿ ಲಾಸ್ಯ ನಂದಿತಾ ಕಾರಿನ ಎರಡನೇ ಸಾಲಿನ ಸೀಟಿನಲ್ಲಿ ಕುಳಿತಿದ್ದರು. ಇತ್ತೀಚೆಗಷ್ಟೇ ಲಾಸ್ಯ ನಂದಿತಾ ಅವರು ಬಿಆರ್ಎಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನಲ್ಗೊಂಡಾಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ನಲ್ಗೊಂಡ ಜಿಲ್ಲೆಯ ನಾರ್ಕೆಟ್ಪಲ್ಲಿಯಲ್ಲಿ ಫೆ.13ರಂದು ನಡೆದ ಘಟನೆಯಲ್ಲಿ ಗೃಹರಕ್ಷಕ ಜಿ ಕಿಶೋರ್ ಅವರಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಓವರ್ಲೋಡ್ ಆಗಿದ್ದ ಲಿಫ್ಟ್ ನೆಲಮಾಳಿಗೆಗೆ ಬಿದ್ದ ಘಟನೆಯಲ್ಲಿಯೂ ಅವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.
ಶಾಸಕಿ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಐದು ಬಾರಿ ಬಿಆರ್ಎಸ್ ಶಾಸಕರಾಗಿದ್ದ ಜಿ ಸಾಯಣ್ಣ ಅವರ ಮಗಳು. ಕಳೆದ ವರ್ಷ ಫೆಬ್ರವರಿ 19 ರಂದು ತಮ್ಮ 72ನೇ ವಯಸ್ಸಿನಲ್ಲಿ ಸಾಯಣ್ಣ ನಿಧನರಾಗಿದ್ದರು. ಸಾಯಣ್ಣ ಮರಣದ ನಂತರ, ನವೆಂಬರ್ 2023 ರಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ನಿಂದ ಅವರ ಮಗಳು ಲಾಸ್ಯಾರನ್ನು ಕಣಕ್ಕಿಳಿಸಲಾಗಿತ್ತು.
Bharat Rashtra Samithi (BRS) MLA Lasya Nanditha died in a road accident on Nehru Outer Ring Road (ORR) near Patancheru in Telangana's Sangareddy on Friday morning. Nanditha represented the Secunderabad Cantonment Assembly constituency. According to reports, her driver lost control of the car and hit the divider at the Aminpur Sultanpur ORR in the Sangareddy district.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm