ಬ್ರೇಕಿಂಗ್ ನ್ಯೂಸ್
24-02-24 01:26 pm HK News Desk ದೇಶ - ವಿದೇಶ
ಉತ್ತರಪ್ರದೇಶ, ಫೆ.24: ಉತ್ತರಪ್ರದೇಶದ ಕಾಸ್ಗಂಜ್ನಲ್ಲಿ ಹುಣ್ಣಿಮೆಯ ನಿಮಿತ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ವೊಂದು ಪಲ್ಟಿಯಾಗಿ ಹೊಂಡದಲ್ಲಿ ಬಿದ್ದಿದೆ. ಟ್ರ್ಯಾಕ್ಟರ್ನ ಟ್ರಾಲಿಯಲ್ಲಿ 7 ಮಕ್ಕಳು ಹಾಗೂ 8 ಮಹಿಳೆಯರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ನಲ್ಲಿ ಒಟ್ಟು 35 ಜನರು ಪ್ರಯಾಣಿಸುತ್ತಿದ್ದರು. ಹೊಂಡದಲ್ಲಿ ಬಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಈ ವೇಳೆ ಟ್ರಾಲಿಯಲ್ಲಿದ್ದ ಕೆಲವರು ಈಜಿಕೊಂಡು ಬಂದು ದಡ ಸೇರಿದ್ದಾರೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಷ್ಟರಲ್ಲಾಗಲೇ ಅಪಘಾತದಲ್ಲಿ 7 ಮಕ್ಕಳು ಮತ್ತು 8 ಮಹಿಳೆಯರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಯೇ ಉಳಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.


ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ಪಟಿಯಾಲಿ ರಸ್ತೆಯ ನಡುವೆ ಇರುವ ಗಧೈಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇಟಾಹ್ ಜಿಲ್ಲೆಯ ಜೈತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟೆ ಕಾಸ್ ಗ್ರಾಮದಲ್ಲಿ ವಾಸಿಸುವ ಜನರು ಹುಣ್ಣಿಮೆಯ ದಿನದಂದು ಗಂಗಾ ಸ್ನಾನ ಮಾಡಲು ಕಾಸ್ಗಂಜ್ನ ಪಟಿಯಾಲಿ ತಹಸೀಲ್ ಪ್ರದೇಶದ ಕದರ್ಗಂಜ್ ಗಂಗಾ ಘಾಟ್ಗೆ ಹೋಗುತ್ತಿದ್ದರು.
ನಂತರ, ದರಿಯಾವ್ಗಂಜ್ ಪ್ರದೇಶದ ಗಾಧಿಯಾ ಗ್ರಾಮದ ಬಳಿ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ, ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಹೊಂಡಕ್ಕೆ ಉರುಳಿ ಬಿದ್ದು ಈ ಮಹಾ ದುರಂತ ಸಂಭವಿಸಿದೆ.
At least fifteen people have died in an accident in Uttar Pradesh's Kasganj district as tractor-trolley overturned.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm