ಬ್ರೇಕಿಂಗ್ ನ್ಯೂಸ್
25-02-24 01:26 pm HK News Desk ದೇಶ - ವಿದೇಶ
ನವದೆಹಲಿ, ಫೆ.25: ಲೋಕಸಭೆ ಚುನಾವಣೆಗೆ ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಬಿಜೆಪಿ ನೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ಮೊದಲ ಫೆ.29ರಂದು ಪ್ರಕಟಗೊಳ್ಳಲಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಹುತೇಕ ಹಾಲಿ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಫೆ.29ರಂದು ಸಭೆ ಸೇರಲಿದ್ದು ಅಂದೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. 543 ಸಂಸತ್ ಸ್ಥಾನಗಳಲ್ಲಿ 370 ಸೀಟುಗಳನ್ನು ಬಿಜೆಪಿ ಒಂದೇ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿದ್ದು ಅಲ್ಲಿಂದಲೇ ಹ್ಯಾಟ್ರಿಕ್ ಜಯ ಸಾಧಿಸಲು ಬಯಸಿದ್ದಾರೆ. 2014ರ ಚುನಾವಣೆಯಲ್ಲಿ 3.37 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2019ರ ಚುನಾವಣೆಯಲ್ಲಿ 4.8 ಲಕ್ಷಕ್ಕೆ ಗೆಲುವಿನ ಅಂತರ ಏರಿಕೆಯಾಗಿತ್ತು.
ಕೇರಳದಲ್ಲಿ ಲೋಕಸಭೆ ಸೀಟು ಗೆಲ್ಲಲು ಭಾರೀ ಪ್ರಯತ್ನ ನಡೆಸಿದ್ದು ಕೆಲವು ಹಾಲಿ ಸಚಿವರನ್ನು ಚುನಾವಣೆ ಕಣಕ್ಕಿಳಿಸಲು ಮುಂದಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕ ಮತ್ತು ಕೇರಳದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯಾಗಲಿದೆ. ಕೇರಳದಲ್ಲಿ ಬಿಜೆಪಿ ರಾಜ್ಯವ್ಯಾಪಿ ಪಾದಯಾತ್ರೆ ನಡೆಸುತ್ತಿದ್ದು, ಫೆ 27ರಂದು ಅಂತ್ಯಗೊಳ್ಳಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ಒಂದೆರಡು ದಿನಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರಲ್ಲಿ ನಟಿ ಶೋಭನಾ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಟ ಸುರೇಶ್ ಗೋಪಿ, ಪಿಸಿ ಜಾರ್ಜ್ ಅಥವಾ ಅವರ ಮಗ ಶಾನ್ ಜಾರ್ಜ್, ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೈ ಮುಂತಾದವರ ಹೆಸರು ಕೇಳಿಬರುತ್ತಿದೆ.
The Bharatiya Janata Party (BJP) is gearing up for the upcoming Lok Sabha elections, with plans to announce over 150 candidates following the first meeting of its central election committee scheduled for February 29.
21-01-25 10:59 pm
HK News Desk
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
21-01-25 06:00 pm
Mangaluru Correspondent
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm