ಬ್ರೇಕಿಂಗ್ ನ್ಯೂಸ್
25-02-24 01:26 pm HK News Desk ದೇಶ - ವಿದೇಶ
ನವದೆಹಲಿ, ಫೆ.25: ಲೋಕಸಭೆ ಚುನಾವಣೆಗೆ ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಬಿಜೆಪಿ ನೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ಮೊದಲ ಫೆ.29ರಂದು ಪ್ರಕಟಗೊಳ್ಳಲಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಹುತೇಕ ಹಾಲಿ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಫೆ.29ರಂದು ಸಭೆ ಸೇರಲಿದ್ದು ಅಂದೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. 543 ಸಂಸತ್ ಸ್ಥಾನಗಳಲ್ಲಿ 370 ಸೀಟುಗಳನ್ನು ಬಿಜೆಪಿ ಒಂದೇ ಗೆಲ್ಲುವ ಗುರಿ ಇಟ್ಟುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿದ್ದು ಅಲ್ಲಿಂದಲೇ ಹ್ಯಾಟ್ರಿಕ್ ಜಯ ಸಾಧಿಸಲು ಬಯಸಿದ್ದಾರೆ. 2014ರ ಚುನಾವಣೆಯಲ್ಲಿ 3.37 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2019ರ ಚುನಾವಣೆಯಲ್ಲಿ 4.8 ಲಕ್ಷಕ್ಕೆ ಗೆಲುವಿನ ಅಂತರ ಏರಿಕೆಯಾಗಿತ್ತು.
ಕೇರಳದಲ್ಲಿ ಲೋಕಸಭೆ ಸೀಟು ಗೆಲ್ಲಲು ಭಾರೀ ಪ್ರಯತ್ನ ನಡೆಸಿದ್ದು ಕೆಲವು ಹಾಲಿ ಸಚಿವರನ್ನು ಚುನಾವಣೆ ಕಣಕ್ಕಿಳಿಸಲು ಮುಂದಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕ ಮತ್ತು ಕೇರಳದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯಾಗಲಿದೆ. ಕೇರಳದಲ್ಲಿ ಬಿಜೆಪಿ ರಾಜ್ಯವ್ಯಾಪಿ ಪಾದಯಾತ್ರೆ ನಡೆಸುತ್ತಿದ್ದು, ಫೆ 27ರಂದು ಅಂತ್ಯಗೊಳ್ಳಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ಒಂದೆರಡು ದಿನಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರಲ್ಲಿ ನಟಿ ಶೋಭನಾ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಟ ಸುರೇಶ್ ಗೋಪಿ, ಪಿಸಿ ಜಾರ್ಜ್ ಅಥವಾ ಅವರ ಮಗ ಶಾನ್ ಜಾರ್ಜ್, ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೈ ಮುಂತಾದವರ ಹೆಸರು ಕೇಳಿಬರುತ್ತಿದೆ.
The Bharatiya Janata Party (BJP) is gearing up for the upcoming Lok Sabha elections, with plans to announce over 150 candidates following the first meeting of its central election committee scheduled for February 29.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm