ಬ್ರೇಕಿಂಗ್ ನ್ಯೂಸ್
26-02-24 04:36 pm HK News Desk ದೇಶ - ವಿದೇಶ
ಲಕ್ನೋ, ಫೆ.26: ಜ್ಞಾನವಾಪಿ ಮಸೀದಿ ಕಟ್ಟಡದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ವಾರಣಾಸಿ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾ ನ್ಯಾಯಾಧೀಶರು ನೀಡಿರುವ ತೀರ್ಪು ಮತ್ತು ವ್ಯಾಸ್ ಜೀ ಕಾ ತೆಹಖಾನಾದಲ್ಲಿ ಪೂಜೆ ಸಲ್ಲಿಸಬಹುದು ಎಂದು ಜನವರಿ 31ರಂದು ನೀಡಿದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಯಾವುದೇ ಅಗತ್ಯ ಕಾಣುತ್ತಿಲ್ಲ ಎಂದು ತೀರ್ಪು ನೀಡಿದ್ದಾರೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, "ಜನವರಿ 17 ಮತ್ತು 31ರ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಸಲ್ಲಿಸಿದ್ದ ಮೊದಲ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇದರಂತೆ ಜ್ಞಾನವಾಪಿ ಸಂಕೀರ್ಣದ 'ವ್ಯಾಸ್ ಜೀ ಕಾ ತೆಹಖಾನಾ'ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಸುವುದಕ್ಕೆ ತೊಂದರೆಯಿಲ್ಲ. ಅಂಜುಮನ್ ಇಂತೇಜಾಮಿಯಾ ಸುಪ್ರೀಂ ಕೋರ್ಟ್ಗೆ ಹೋಗುವ ಸಾಧ್ಯತೆ ಇದೆ. ಆಗ ನಾವು ನಮ್ಮ ಕೇವಿಯಟ್ ಅನ್ನು ಉನ್ನತ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಜನವರಿ 31 ರಂದು ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ನೆಲಮಾಳಿಗೆ 'ವ್ಯಾಸ್ ತೆಹಖಾನಾ'ದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಗೆ ಪೂಜಾ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ನಿರ್ದೇಶನ ನೀಡಿತ್ತು.
The Allahabad High Court on Monday dismissed a plea by AIMC which challenged a Varanasi court’s order which had permitted the Hindu side to offer puja in the ‘vyas tehkhana’ of the Gyanvapi complex.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm