ಬ್ರೇಕಿಂಗ್ ನ್ಯೂಸ್
26-02-24 04:36 pm HK News Desk ದೇಶ - ವಿದೇಶ
ಲಕ್ನೋ, ಫೆ.26: ಜ್ಞಾನವಾಪಿ ಮಸೀದಿ ಕಟ್ಟಡದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ವಾರಣಾಸಿ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾ ನ್ಯಾಯಾಧೀಶರು ನೀಡಿರುವ ತೀರ್ಪು ಮತ್ತು ವ್ಯಾಸ್ ಜೀ ಕಾ ತೆಹಖಾನಾದಲ್ಲಿ ಪೂಜೆ ಸಲ್ಲಿಸಬಹುದು ಎಂದು ಜನವರಿ 31ರಂದು ನೀಡಿದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಯಾವುದೇ ಅಗತ್ಯ ಕಾಣುತ್ತಿಲ್ಲ ಎಂದು ತೀರ್ಪು ನೀಡಿದ್ದಾರೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, "ಜನವರಿ 17 ಮತ್ತು 31ರ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಸಲ್ಲಿಸಿದ್ದ ಮೊದಲ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇದರಂತೆ ಜ್ಞಾನವಾಪಿ ಸಂಕೀರ್ಣದ 'ವ್ಯಾಸ್ ಜೀ ಕಾ ತೆಹಖಾನಾ'ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಸುವುದಕ್ಕೆ ತೊಂದರೆಯಿಲ್ಲ. ಅಂಜುಮನ್ ಇಂತೇಜಾಮಿಯಾ ಸುಪ್ರೀಂ ಕೋರ್ಟ್ಗೆ ಹೋಗುವ ಸಾಧ್ಯತೆ ಇದೆ. ಆಗ ನಾವು ನಮ್ಮ ಕೇವಿಯಟ್ ಅನ್ನು ಉನ್ನತ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಜನವರಿ 31 ರಂದು ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ನೆಲಮಾಳಿಗೆ 'ವ್ಯಾಸ್ ತೆಹಖಾನಾ'ದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಗೆ ಪೂಜಾ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ನಿರ್ದೇಶನ ನೀಡಿತ್ತು.
The Allahabad High Court on Monday dismissed a plea by AIMC which challenged a Varanasi court’s order which had permitted the Hindu side to offer puja in the ‘vyas tehkhana’ of the Gyanvapi complex.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm