ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm