ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm