ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm