ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.
ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm