ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.
ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
20-10-25 02:56 pm
HK News Desk
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm