ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm