ಬ್ರೇಕಿಂಗ್ ನ್ಯೂಸ್
05-03-24 10:14 pm HK News Desk ದೇಶ - ವಿದೇಶ
ಕಾಸರಗೋಡು, ಮಾ.5: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೇರಳದ ಕಾಸರಗೋಡು ಜಿಲ್ಲೆಯ ಎರಡು ಕಡೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಜಾನ್ಸನ್ ಎಂಬ ಟ್ರಾವೆಲ್ ಏಜನ್ಸಿ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪ್ಪು ಎಂಬಲ್ಲಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಜಾನ್ಸನ್ ನನ್ನು ವಶಕ್ಕೆ ಪಡೆದು ಒಯ್ದಿದ್ದಾರೆ.
ಇದೇ ವೇಳೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಸುಂಕದಕಟ್ಟೆ ಎಂಬಲ್ಲಿ ಮುನ್ನಾ ಅಲಿ ಎಂಬಾತನ ಬಂಧನಕ್ಕಾಗಿ ಅಧಿಕಾರಿಗಳು ಬಲೆ ಬೀಸಿದ್ದರು. ಆದರೆ ಮುನ್ನಾ ಆಲಿ, ಎನ್ಐಎ ದಾಳಿ ಸುಳಿವು ಪಡೆದು ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಎರಡು ಕಡೆಯೂ ಬೆಂಗಳೂರು ವಿಭಾಗದ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುನ್ನಾ ಆಲಿ ಈ ಹಿಂದೆ ಕೊಚ್ಚಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿಯಾ ಆರೋಪಿಯಾಗಿದ್ದಾನೆ. ಪಿಎಫ್ಐ ಸಂಘಟನೆಯ ಹವಾಲಾ ಹಣದ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಕಾಸರಗೋಡು ಜಿಲ್ಲೆಯ ಎರಡು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದೇಶಾದ್ಯಂತ ಏಳು ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ಪಿಎಫ್ಐ ಸಂಘಟನೆಗೆ ಹವಾಲಾ ರೂಪದಲ್ಲಿ ಹಣ ಪೂರೈಸುತ್ತಿದ್ದ ಪ್ರಕರಣದಲ್ಲಿ ಬಂಟ್ವಾಳ, ಮಂಗಳೂರಿನಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದಿದ್ದರು. ಅದೇ ಪ್ರಕರಣದಲ್ಲಿ ಜಾನ್ಸನ್ ಬಂಧನ ಆಗಿದೆ ಎನ್ನುವ ಮಾಹಿತಿಯಿದೆ.
The National Investigative Agency (NIA) carried out raids at two locations reportedly in connection with a hawala case in Kasaragod district of Kerala on March 5. The operation led to the reported arrest of a travel agent by the NIA.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm