ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm