ಬ್ರೇಕಿಂಗ್ ನ್ಯೂಸ್
08-03-24 02:15 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಜನಸಾಮಾನ್ಯರ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ.
ಈಗಾಗಲೇ ಉಜ್ವಲ ಯೋಜನೆಯಡಿ ಬಡ ಕುಟುಂಬಕ್ಕೆ ಪ್ರತಿ ಎಲ್ಪಿಜಿ ಸಿಲಿಂಡರ್ಗೆ ಸರಕಾರ 300 ರೂ. ಸಬ್ಸಿಡಿ ನೀಡುತ್ತಿದೆ. ಸಬ್ಸಿಡಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸಿ ಮುಂದಿನ ಒಂದು ವರ್ಷದ ವರೆಗೆ ವಿಸ್ತರಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಎಕ್ಸ್'ನಲ್ಲಿ ಈ ಬಗ್ಗೆ ಫೋಸ್ಟ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲಿದೆ. ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳಿಗೆ ಅಂದರೆ 14.2 ಕೆಜಿ ತೂಕದ ಸಿಲಿಂಡರ್ಗಳಿಗೆ 200 ರೂ.ಗಳಿಂದ 300 ರೂ.ಗೆ ಸಬ್ಸಿಡಿ ಹೆಚ್ಚಿಸಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸಿಲಿಂಡರ್ಗೆ 300 ರೂ. ಸಬ್ಸಿಡಿ ನೀಡಲಾಗಿದ್ದು, ಇದು ಮಾರ್ಚ್ 31 ರಂದು ಕೊನೆಗೊಳ್ಳುತ್ತದೆ.
ಸದ್ಯ ಕೇಂದ್ರ ಸರ್ಕಾರ ಪ್ರತಿ ಸಿಲಿಂಡರ್ಗೆ 300 ರೂಪಾಯಿ ಸಬ್ಸಿಡಿ ನೀಡುತ್ತಿದೆ. ಈಗ ಮತ್ತೆ 100 ರೂ. ಸಬ್ಸಿಡಿ ಘೋಷಣೆ ಮಾಡಿರುವುದರಿಂದ ಒಟ್ಟಾರೆ ಒಂದು ಸಿಲಿಂಡರ್ಗೆ 400 ರೂಪಾಯಿ ಸಬ್ಸಿಡಿ ಸಿಗಲಿದೆ. ಸಬ್ಸಿಡಿ ಹೊರತು ಪಡಿಸಿ ಸಿಲಿಂಡರ್ ಬೆಲೆ 555 ರೂಪಾಯಿ ಇದ್ದು, ಒಂದೊಮ್ಮೆ ಸಬ್ಸಿಡಿ ತೆಗೆದು ಹಾಕಿದರೆ ಒಂದು ಸಿಲಿಂಡರ್ಗೆ 955 ರೂ. ನೀಡಬೇಕಾಗುತ್ತದೆ.
On the occasion of International Women's Day, Prime Minister Narendra Modi announced a reduction of Rs 100 in the prices of LPG cylinders. The revised prices will come into effect beginning midnight, government sources said.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm