ಬ್ರೇಕಿಂಗ್ ನ್ಯೂಸ್
25-03-24 12:09 pm HK News Desk ದೇಶ - ವಿದೇಶ
ಈರೋಡ್, ಮಾ.25: ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಎಂಡಿಎಂಕೆ ಸಂಸದ ಎ ಗಣೇಶಮೂರ್ತಿ (76) ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಕೀಟನಾಶಕ 'ಸಲ್ಫಸ್' ಸೇವಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅವರ ಸ್ಥಿತಿ ಗಂಭೀರವಾಗಿದೆ.
ಇದನ್ನು ಕೇಳಿ ಆಘಾತಗೊಂಡ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಈರೋಡ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಐಸಿಯುಗೆ ದಾಖಲಿಸಿ, ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಅವರಲ್ಲಿ ಹೆಚ್ಚಿನ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಗಣೇಶಮೂರ್ತಿ ಅವರಿಗೆ ಟಿಕೆಟ್ ನೀಡಲು ಎಂಡಿಎಂಕೆ ಪಕ್ಷದ ಹೈ ಕಮಾಂಡ್ ನಿರಾಕರಿಸಿದೆ. ಇದರಿಂದ ನೊಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪಕ್ಷದ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜತೆ ಮೈತ್ರಿ ಹೊಂದಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ. ಎಂಡಿಎಂಕೆಗೆ ತಿರುಚಿರಾಪಳ್ಳಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
Ganeshamoorthy of the MDMK, the sitting Lok Sabha MP from Erode constituency in Tamil Nadu, was rushed to a hospital after he allegedly consumed pesticide. Ganesamoorthy, who was elected on a DMK ticket in the 2019 Lok Sabha polls, was admitted to a private hospital by his family members after he developed uneasiness and began to puke in the morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm