ಬ್ರೇಕಿಂಗ್ ನ್ಯೂಸ್
25-03-24 12:09 pm HK News Desk ದೇಶ - ವಿದೇಶ
ಈರೋಡ್, ಮಾ.25: ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಎಂಡಿಎಂಕೆ ಸಂಸದ ಎ ಗಣೇಶಮೂರ್ತಿ (76) ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಕೀಟನಾಶಕ 'ಸಲ್ಫಸ್' ಸೇವಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅವರ ಸ್ಥಿತಿ ಗಂಭೀರವಾಗಿದೆ.
ಇದನ್ನು ಕೇಳಿ ಆಘಾತಗೊಂಡ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಈರೋಡ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಐಸಿಯುಗೆ ದಾಖಲಿಸಿ, ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಅವರಲ್ಲಿ ಹೆಚ್ಚಿನ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಗಣೇಶಮೂರ್ತಿ ಅವರಿಗೆ ಟಿಕೆಟ್ ನೀಡಲು ಎಂಡಿಎಂಕೆ ಪಕ್ಷದ ಹೈ ಕಮಾಂಡ್ ನಿರಾಕರಿಸಿದೆ. ಇದರಿಂದ ನೊಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪಕ್ಷದ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜತೆ ಮೈತ್ರಿ ಹೊಂದಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ. ಎಂಡಿಎಂಕೆಗೆ ತಿರುಚಿರಾಪಳ್ಳಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
Ganeshamoorthy of the MDMK, the sitting Lok Sabha MP from Erode constituency in Tamil Nadu, was rushed to a hospital after he allegedly consumed pesticide. Ganesamoorthy, who was elected on a DMK ticket in the 2019 Lok Sabha polls, was admitted to a private hospital by his family members after he developed uneasiness and began to puke in the morning.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm