ಬ್ರೇಕಿಂಗ್ ನ್ಯೂಸ್
27-03-24 01:59 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ದೇಶದ ಅಭಿವೃದ್ಧಿಯ ಕುರಿತಾಗಿ ರಾಜಕಾರಣಿಗಳ ಪ್ರಚೋದನಾತ್ಮಕ ಮಾತುಗಳನ್ನು ನಂಬಬೇಡಿ. ಈ ರೀತಿಯ ಮಾತುಗಳನ್ನು ನಂಬುವುದೇ ಭಾರತೀಯರು ಮಾಡುತ್ತಿರುವ ಬಹುದೊಡ್ಡ ತಪ್ಪು ಎಂದು ಪ್ರಸಿದ್ಧ ಆರ್ಥಿಕ ತಜ್ಞ, ಮಾಜಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಆರ್ಥಿಕತೆ ಬಗ್ಗೆ ರಾಜಕಾರಣಿಗಳು ಹೇಳುತ್ತಿರುವ ಹೈಪ್ ಮಾತುಗಳು ನಿಜವಾಗಲು ತುಂಬ ವರ್ಷಗಳ ಕಠಿಣ ಪರಿಶ್ರಮ ಬೇಕಾಗಬಹುದು. ಆದರೆ ಕೆಲವು ರಾಜಕಾರಣಿಗಳು ಇದೇ ಸತ್ಯವೆಂದು ಜನರನ್ನು ತಮ್ಮ ಮಾತುಗಳಿಂದ ನಂಬಿಸುತ್ತಿದ್ದಾರೆ. ಅಂತಹ ಮಾತುಗಳನ್ನು ನಂಬುತ್ತಿರುವುದೇ ಭಾರತೀಯರು ಮಾಡುತ್ತಿರುವ ದೊಡ್ಡ ತಪ್ಪು ಎಂದವರು ಹೇಳಿದ್ದಾರೆ.
ಚುನಾವಣೆ ಬಳಿಕ ಅಧಿಕಾರಕ್ಕೆ ಬರುವವರಿಗೆ ಶಿಕ್ಷಣವನ್ನು ಉತ್ತಮಗೊಳಿಸುವುದು ಮತ್ತು ಶಿಕ್ಷಣ ಮುಗಿಸಿ ಪರಿಶ್ರಮಿಗಳನ್ನು ಹೊರಗೆ ತರಬೇಕಾದ ಬಹುದೊಡ್ಡ ಸವಾಲು ಇದೆ. ಇಂತಹ ಮಾನದಂಡಗಳನ್ನು ಅನುಸರಿಸದೇ ಇದ್ದಲ್ಲಿ ಭಾರತದ ಯುವಜನಾಂಗ ಮುಂದೆ ಕಷ್ಟ ಪಡಬೇಕಾಗಬಹುದು ಎಂದಿದ್ದಾರೆ.
2047ರಲ್ಲಿ ಅಭಿವೃದ್ಧಿಗೊಂಡ ರಾಷ್ಟ್ರವಾಗಬೇಕೆಂದು ಮೋದಿ ಟಾರ್ಗೆಟ್ ನೀಡಿರುವುದನ್ನು ನಾನ್ ಸೆನ್ಸ್ ಎಂದಿರುವ ರಘುರಾಮ್ ರಾಜನ್, ನಿಮ್ಮ ಅದೆಷ್ಟೋ ಮಕ್ಕಳಿಗೆ ಉತ್ತಮ ಶಿಕ್ಷಣವೇ ಸಿಗುತ್ತಿಲ್ಲ. ಬಡತನ ಕಾರಣದಿಂದ ಶಾಲೆಯಿಂದ ಹೊರಗುಳಿಯುವೇ ರೇಟಿಂಗ್ ಹೆಚ್ಚಿರುವಾಗ ಇಂತಹದ್ದನ್ನೆಲ್ಲ ಒಪ್ಪಿಕೊಳ್ಳುವ ಹಾಗಿಲ್ಲ. ನಾವು ಖಂಡಿತವಾಗಿಯೂ ಅಭಿವೃದ್ಧಿಯ ಗತಿಯಲ್ಲಿದ್ದೇವೆ. ಆದರೆ ಯುವಜನಾಂಗ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯುತ್ತಿದ್ದರೆ ಮಾತ್ರ ಇದನ್ನೆಲ್ಲ ಹೇಳಿಕೊಳ್ಳಬಹುದು. ವಾಸ್ತವ ಹೇಳಬೇಕಿದ್ದರೆ ನಾವು ವಿಷಾದಕರ ಸ್ಥಿತಿಯಲ್ಲಿದ್ದೇವೆ ಎಂದಿದ್ದಾರೆ.
ಭಾರತ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವುದರಿಂದ ವಿದೇಶಿಗರು ಹೂಡಿಕೆಯತ್ತ ಆಸಕ್ತಿ ತೋರುತ್ತಿದ್ದಾರೆ. ಹಾಗಂತ, ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತ ಸರಕಾರದ ಬಜೆಟ್ ನೀತಿಗಳಲ್ಲಿ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡುವ ಬದಲು ಚಿಪ್ ಸಬ್ಸಿಡಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸೆಮಿ ಕಂಡಕ್ಟರ್ ಉದ್ಯಮ ಸ್ಥಾಪನೆಗೆ ನಾವು 76 ಸಾವಿರ ಕೋಟಿ ಸಬ್ಸಿಡಿ ನೀಡುತ್ತಿದ್ದರೆ, ಉನ್ನತ ಶಿಕ್ಷಣಕ್ಕೆ 46 ಸಾವಿರ ಕೋಟಿ ವ್ಯಯ ಮಾಡುತ್ತಿದ್ದೇವೆ. ಚಿಪ್ ತಯಾರಿಸುವ ಉದ್ಯಮಗಳ ಸ್ಥಾಪನೆಗೆ ಆಸಕ್ತಿ ತೋರುತ್ತಿದ್ದಾರೆ. ಆದರೆ ನಮ್ಮಲ್ಲಿ ಚಿಪ್ ತಯಾರಿಸವುದು ಹೇಗೆ ಎಂಬುದನ್ನು ತಿಳಿಯುವ ಇಂಜಿನಿಯರ್ ಗಳ ಉತ್ಪಾದನೆಗೆ ಆಸಕ್ತಿ ತೋರುತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Former Reserve Bank of India Governor and well-known economist Raghuram Rajan said India is making a mistake believing the hype around its strong economic growth. Rajan’s comment came during an interview with Bloomberg News, where he said there are significant structural problems that need to be fixed for the country to meet its potential.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm