ಬ್ರೇಕಿಂಗ್ ನ್ಯೂಸ್
30-03-24 12:30 pm HK News Desk ದೇಶ - ವಿದೇಶ
ಚೆನ್ನೈ, ಮಾ 30: ತಮಿಳು ನಟ ಡೇನಿಯಲ್ ಬಾಲಾಜಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಹೆಸರುವಾಸಿಯಾಗಿದ್ದಾರೆ, ತಮ್ಮ ವೈವಿಧ್ಯಯ ಪ್ರತಿಭೆ, ಬೆಳ್ಳಿತೆರೆ ಮೇಲೆ ಮನಮೋಹಕ ವರ್ಚಸ್ಸಿಗೆ ಹೆಸರುವಾಸಿಯಾಗಿದ್ದ ನಟನಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್ ಆಗಿ ನಟಿಸುವ ಮೂಲಕ ಕನ್ನಡಿಗರ ಮನೆಮಾತಾಗಿದ್ದ ನಟ ಡೇನಿಯಲ್ ಬಾಲಾಜಿ ಬಹು ಭಾಷಾನಟನಾಗಿಯೂ ಗುರುತಿಸಿಕೊಂಡಿದ್ದರು.
ಇಂದು ಅಂತಿಮ ದರ್ಶನ, ಅಂತ್ಯಕ್ರಿಯೆ:
ಡೇನಿಯಲ್ ಅವರ ಪಾರ್ಥಿವ ಶರೀರವನ್ನು ಇಂದು ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. ಅವರ ನಿಧನದ ಸುದ್ದಿ ತಮಿಳು ಚಿತ್ರರಂಗದಲ್ಲಿ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ.
ಧಾರಾವಾಹಿ ಮೂಲಕ ತಮ್ಮ ಸಿನಿವೃತ್ತಿಯನ್ನು ಆರಂಭಿಸಿದ ಬಾಲಾಜಿ ಅವರು ಚಿತ್ತಿ ಧಾರಾವಾಹಿಯಲ್ಲಿ ಮಾಡಿದ ಡೇನಿಯಲ್ ಪಾತ್ರ ವ್ಯಾಪಕ ಮನ್ನಣೆ ಮತ್ತು ಜನಮೆಚ್ಚುಗೆ ಗಳಿಸಿ ಆ ಪಾತ್ರ ಮೂಲಕವೇ ಅವರು ನಂತರ ಡೇನಿಯಲ್ ಬಾಲಾಜಿ ಎಂದು ಜನಪ್ರಿಯರಾದರು. ನಟನೆ ಹೊರತುಪಡಿಸಿ ಬಾಲಾಜಿ ದೇವರ ಮೇಲೆ ಅಪಾರ ನಂಬಿಕೆ ಉಳ್ಳವರಾಗಿದ್ದರು. ಅವಡಿಯಲ್ಲಿ ದೇವಾಲಯವನ್ನು ನಿರ್ಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಡೇನಿಯಲ್ ಹೆಸರು ಬಂದಿದ್ದು ಹೇಗೆ?
ಸಿನಿಮಾಗಳಲ್ಲಿ ಖಳನಾಯಕನ ಪಾತ್ರ ಮಾಡುತ್ತ ಜನಪ್ರಿಯತೆ ಪಡೆದಿದ್ದ ಬಾಲಾಜಿ ಅವರು ಹೆಚ್ಚಾಗಿ ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಬಾಲಾಜಿ ಅವರು ಕಮಲ್ ಹಾಸನ್ರ ತೆರೆ ಕಾಣದ ‘ಮರುದುನಯಗಂ’ ಸಿನಿಮಾದಲ್ಲಿ ಯುನಿಟ್ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ‘ಚಿತ್ತಿ’ ಎನ್ನುವ ಧಾರಾವಾಹಿಯಲ್ಲಿಯೂ ಅವರು ನಟಿಸಿದ್ದರು. ಈ ಸಿನಿಮಾದಲ್ಲಿ ರಾಧಿಕಾ ಶರತ್ಕುಮಾರ್ ಅವರು ಮುಖ್ಯ ಪಾತ್ರ ನಿರ್ವಹಿಸಿದ್ದರು. ಧಾರಾವಾಹಿಯಲ್ಲಿ ಬಾಲಾಜಿ ಅವರು ಡೇನಿಯಲ್ ಎನ್ನುವ ಪಾತ್ರ ಮಾಡಿದ್ದರು. ಇದರಿಂದಲೇ ಅವರಿಗೆ ಡೇನಿಯಲ್ ಎಂಬ ಸ್ಕ್ರೀನ್ ಹೆಸರು ಬಂತು.
ಸಿನಿಮಾಗಳಲ್ಲಿ ನಟನೆ ;
‘ಏಪ್ರಿಲ್ ಮಧತ್ತಿಲ್’ ಎನ್ನುವ ಸಿನಿಮಾದಲ್ಲಿ ಅವರು ನಟಿಸಿದ್ದರು. ಸೂರ್ಯ, ಜ್ಯೋತಿಕಾರ ಕಾಖ ಕಾಖ‘ ಸಿನಿಮಾವು ಬಾಲಾಜಿಗೆ ಜನಪ್ರಿಯತೆ ನೀಡಿತ್ತು. ವೆಟ್ರಿ ಮಾರನ್ ಅವರ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿಯೂ ಬಾಲಾಜಿ ನಟಿಸಿದ್ದರು. ದಳಪತಿ ವಿಜಯ್, ಅಜಿತ್, ಸಿಂಬು ಅವರ ಸಿನಿಮಾದಲ್ಲಿಯೂ ಬಾಲಾಜಿ ನಟಿಸಿದ್ದರು. ಕೊನೆಯದಾಗಿ ಅವರಯ ‘ಅರಿಯಾವನ್’ ಚಿತ್ರದಲ್ಲಿ ನಟಿಸಿದ್ದರು.
Tamil actor Daniel Balaji passed away on Friday, March 29 night. He suffered a heart attack following which he was rushed to a private hospital in Chennai, where he breathed his last. Balaji’s final rites will be held today. He was 48.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm