ಬ್ರೇಕಿಂಗ್ ನ್ಯೂಸ್
31-03-24 02:06 pm HK NEWS ದೇಶ - ವಿದೇಶ
ಬೆಂಗಳೂರು, ಮಾ.31: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಲು ಗೃಹ ಸಚಿವ ಅಮಿತ್ ಶಾ ಖುದ್ದು ಅಖಾಡಕ್ಕಿಳಿಯುತ್ತಿದ್ದಾರೆ. ಡಿ.ಕೆ. ಬ್ರದರ್ಸ್ಗೆ ಠಕ್ಕರ್ ನೀಡಲು ಬಿಜೆಪಿ ರಣತಂತ್ರ ಹಣೆದಿದ್ದು, ಮೈತ್ರಿ ನಾಯಕರು ಬೃಹತ್ ರೋಡ್ ಶೋ ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಡಿಸಿಎಂ ಡಿಕೆಶಿ ಸೋದರ ಡಿಕೆ ಸುರೇಶ್ ಸಂಸದರಾಗಿರುವ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡು ಆಗಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆಗೆ ಬೃಹತ್ ರ್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಡಿಕೆಶಿ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.
ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಬೃಹತ್ ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಹೂಡಲಿದ್ದಾರೆ.
ಬೆಂಗಳೂರಿನಲ್ಲಿ ಸಮಾವೇಶದ ಬಳಿಕ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಮತಯಾಚನೆ ಮಾಡಲಿರುವ ಅಮಿತ್ ಶಾಗೆ ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.
Union Home Minister Amit Shah will launch his Lok Sabha poll campaign in Karnataka from April 2, BJP state general secretary V Sunil Kumar said on Saturday. Shah will hold a meeting with the Bharatiya Janata Party and its ally Janata Dal (Secular) leaders at 9 am on April 2.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm